Home / ಕವನ / ಕವಿತೆ / ಹೊಸ ಸೂರ್ಯನುದಯಕೆ

ಹೊಸ ಸೂರ್ಯನುದಯಕೆ

ತುಂಬಿದೊಡಲ ಅಬಲೆ ಮೇಲೆ
ಕಾಮಾಂಧರ ನರ್ತನ
ತಾಯೆ ನಿನ್ನ ಒಡಲ ಮೇಲೆ
ನಿತ್ಯ ರಕ್ತ ತರ್ಪಣ
ಅರಳಲಿಲ್ಲಿ ತಾವು ಎಲ್ಲಿ
ಫಲಪುಷ್ಪದ ನಂದನ?

ಅತ್ತು ಅತ್ತು ಸತ್ತ ಭ್ರೂಣ
ಬಿಕ್ಕಿ ಬಿಕ್ಕಿ ಅತ್ತ ’ಬಾನು’
ಜೀವ ಜೀವದಾರ್ತನಾದ
ಕಾಣಲಿಲ್ಲ ಕುರುಡು ಜನಕೆ
ಕೇಳಲಿಲ್ಲ ಕಿವುಡು ಮನಕೆ

ಖಾಕಿಬೂಟಿನಟ್ಪಹಾಸ
ಖಾದಿ ಖದರ ಜಯದ ಘೋಷ
ಹಾಡುಹಗಲೆ ಮೃತ್ಯುಪಾಶ
ಹೆಣ್ಣೆ ನಿನಗೆ ಜೀವಶಿಕ್ಷೆ
ಹೆಜ್ಜೆ ಹೆಜ್ಜೆಗಿರಲು ಎಲ್ಲಿರಕ್ಷೆ?

ಹಿಂದು ಮುಸ್ಲಿಂ ಹೆಸರಿನಲ್ಲಿ
‘ಬಲ್ಕೀಸ’ಳಾ ಉಸಿರು ಎಲ್ಲಿ
ಅಂಧ ಮತಕೆ ಬಂಧವೆಲ್ಲಿ
ತಂದೆ ತಾಯಿ ಬಂಧುವೆಲ್ಲಿ
ಎಲ್ಲಿ ಎಲ್ಲಿ ಎಲ್ಲೆ ಎಲ್ಲಿ
ಉರಿಯ ಸುರಿವ ಜ್ವಾಲೆಗೆ?

ಪ್ರೇತದಂತೆ ನರ್ತನ
ಭೂತದಂತೆ ಕೀರ್ತನ
ಹೆಣ್ಣ ದಾಹ ಹೊನ್ನ ದಾಹ ಮಣ್ಣ ದಾಹ
ದಾಹ ದಾಹ ದಾಹ ದಾಹ…
ದಾಸನಾಗಿ ಮರೆತೆಯಲ್ಲೋ
ಮನುಜನೆಂಬುದ

ಕಮರಿಹೋಯ್ತೆ ಮೊಗ್ಗೆ ನಿನ್ನ
ಹೂವಾಗುವ ಕನಸು?
ಕಸವಾಯಿತೆ ಕಾಲಡಿಯಲ್ಲಿ
ಕಂದ ನಿನ್ನ ಮನಸು?
ಕಣ್ಣು ತೆಗೆವ ಮುನ್ನ ಕೊಂದರಲ್ಲ ನಿನ್ನ
ಥೂ… ಎಂಥ ಹೊಲಸು

ಅಲ್ಲಿ ’ಬಾನು’ ಇಲ್ಲಿ ನಾನು
ನಿತ್ಯ ನರಕಯಾತನೆ
ಎಲ್ಲೆ ಇರಲಿ ಹೇಗೆ ಇರಲಿ
ತಪ್ಪಲಿಲ್ಲ ಯೋಚನೆ
ಹೆಣ್ಣಿಗಿರುವ ಸ್ವಾತಂತ್ರ್ಯ
ಬರಿಯ ಹುಚ್ಚು ಕಲ್ಪನೆ

ತಾಯಿ ತಂಗಿ ಮಾತೃದೈವ
ಎನುವದೆಲ್ಲ ಬೊಗಳೆ
ಸಂತೈಸಲಿ ಹೇಗೆ ಮಗಳೆ
ಇರಲು ದಿನವೂ ರಗಳೆ?
ನಿನ್ನ ನೋವು ನಿನ್ನ ಸಾವು
ತಿಳಿವುದೆಂತು ತಾಯ್ಗಂಡರ ಎದೆಗೆ?

ನ್ಯಾಯವಿಲ್ಲಿ ಕಣ್ಣು ಕುರುಡು
ಕೂಗಿಗಿಲ್ಲಿ ಕಿವಿಯೆ ಕೊರಡು
ಹೃದಯವದು ಬರಿದೆ ಬರಡು
ಇರುವ ಜನರ ಮಾತಿಗಿಲ್ಲ ಎರಡು
ಎನಿತು ಕಾಲ ನೂಕಬೇಕೋ
ನಾಕ ಬೆಳಗಲು?

ನೋವಿಗಿಲ್ಲ ಜಾತಿ ಧರ್ಮ
ಜೀವಕೇಕೆ ಮತದ ಕರ್ಮ
ಬಸವ ಬುದ್ಧ ಏಸು ಬಿದ್ದ
ರಾಮ ರಹಿಮ ಎಲ್ಲಿ ಗೆದ್ದ?
ಕಡಿ ಬಡಿ ಮಂತ್ರವಾಯ್ತೆ ಭಾರತಾಂಬೆಗೆ?
*
ಕಾಯತಿರುವೆ ಕಣ್ಣು ತೆರೆದು
ಹೊಸ ಸೂರ್ಯನ ಉದಯಕೆ!

(ಬಲ್ಕಿಶ್ ಬಾನು ಹೃದಯ ವಿದ್ರಾವಕ ಸಾವಿನ ನೋವಿನಲಿ)
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್