Home / ಕವನ / ಕವಿತೆ / ಹೆಸರಿನೊಳಗೇನಿದೆ?

ಹೆಸರಿನೊಳಗೇನಿದೆ?

ದರ್ಪ ಸೂಚನೆ ಸುಖದ ವಂಚನೆ
’ಮನು’ ಮನದ ಯಾತನೆ
ಜಾತಿ ಧರ್ಮ ಆಸ್ತಿ ಗೌರವ
ಕಾಣಲಾರವೆ ಹೆಸರೊಳಗೆ?

ಊರ ಗೌಡನ ಹೆಸರು
ಶೂದ್ರ ಸಿದ್ದನದೇನು?
ಗೌಡ ಕರೆದಂತೆ ಕರಿಸಿದ್ದನನ್ನು
ಕೂಗಬಹುದೇ ಹೊಲೆಯ ಗೌಡನನ್ನು?

ಇರಬಹುದು ಒಮ್ಮೊಮ್ಮೆ
ಹೆಸರೊಂದೆ ಈರ್ವರಿಗು
ಒಂದೇ ಮನೆಯಲಿ ಸಣ್ಣ ದೊಡ್ಡ
ಜಾತಿ ಮತಗಳ ನಡುವೆ ದೊಡ್ಡ ಗುಡ್ಡ

ಲಂಗೋಟಿ ಇರದವಗೂ
ಗೌಡನೆಂದೆ, ಸಾಮಿಯೆಂದೆ
ಧಣಿಯೆಂದೆ, ಸಾವ್ಕಾರನೆಂದೆ
ಹಾಗಲ್ಲದಿದ್ದರೆ ಅದು ಜಾತಿ ನಿಂದೆ!

ಒಲವಿತ್ತು ಬಲವಿತ್ತು
ಛಲವಿತ್ತು ಗೆಲುವಿತ್ತು
ಊರಾಚೆಯ ಕರಿಯನಿಂದೆ
ಕರೆದೆ ನೀ ನಿನ್ನದೇ ದೇವರ
’ಲೇ ಬಸ್ಯಾ, ಯಂಕ್ಯಾ, ರಾಗ್ಯಾ, ರಾಮ್ಯಾ…’
ವಕ್ರೋಕ್ರ ಪೆಕರ ಕಾಗೆ ಕರೆವಂತೆ

ಹೆಸರಿನಿಂದಲೆ ಧರ್ಮ
ಹೆಸರಿನಿಂದಲೆ ಕರ್ಮ
ಗೊತ್ತಿಲ್ಲ ಯಾರಿಗೆ ಇದರ ಮರ್ಮ?

ಅಕ್ಬರನೆಂದರೆ ಮುಸ್ಲಿಮನೆಂದೆ
ಆಚಾರಿಯೆಂದರೆ ಹಾರವನೆಂದೆ
ಡೇವಿಡ್ಡು ಆಂಥೋನಿ ಕ್ರಿಸ್ತನೆಂದೆ

ಎಂದಾದರು ಎಲ್ಲಾದರು
ಇಟ್ಟು ಕರೆದೆವೆ ಬೇರೆ ಹೆಸರು
ನಮ್ಮ ಮಕ್ಕಳಿಗೂ ಅದಲು ಬದಲು?

ಮರದ ತುಂಡು
ಕಲ್ಲು ಗುಂಡು
ಊರ ಹೊರಗಿನ ದೇವರು

ಮಾರಮ್ಮ ದುರುಗಮ್ಮ
ಸುಂಕ್ಲಮ್ಮ ಮರಿಗೆಮ್ಮ
ಎಷ್ಟು ಚಂದದ ಹೆಸರು
ಕುರಿ ಕೋಳಿ ಕ್ವಾಣ
ಉಳಿಸಿದ್ದು ಇವರ ನ್ಯಾಣ!

ಚಂದ ಚಂದದ ಮೂರ್ತಿ
ಜಗವ ತುಂಬಿದೆ ಕೀರ್ತಿ
ದೊಡ್ಡ ಮಂದಿಯ ದೇವರು
ಕೃಷ್ಣನಂತೆ ರಾಮನಂತೆ
ಎಲ್ಲಾ ಅವನ ಲೀಲೆಯಂತೆ
ಗೋವಿಂದಾ ಮಾಯೆ ನಿನ್ನ ಹೆಸರು!

ಜಾತಿ ಜಾತಿಗೂ ಒಬ್ಬ
ಧರ್ಮ ಧರ್ಮಕೂ ಮಬ್ಬ
ಸೃಷ್ಟಿಸಿದೆ ಬಲುಚತುರ ಮಾಯಕಾರ

ನಾಮ ನಾಮಗಳ ಹೊಸೆದು
ಒಂದೇ ದಾರದಿ ಬೆಸೆದು
ಜೀವ ಜೀವಕೆ ಜೀವಕೊಡುವುದ
ಬೇಕೆಂತಲೇ ಮರೆತ ಗೆಣೆಕಾರ!

ನಿನ್ನೆ ಮೊನ್ನೆಗಳಿಂದ ಕತ್ತಲೆ ಸೀಳಿ
ನಾಲ್ಕಕ್ಷರದ ಬೆಳಕು ಮೂಡಿ
ಉಟ್ಟ ವಸ್ತ್ರದ ಜೊತೆಗೇ
ಇಟ್ಟ ಹೆಸರುಗಳು ಬದಲಾಗಿ
ಸಂದಿದೆ ನಗರಜೀವನದ ಷೋಕಿ

ಹೆಸರಿನಲ್ಲೇನಿದೆ ಬರೀ ಹೆಸರು
ಲೋಕವಾದರೆ ತಾ ಒಂದೇ ಉಸಿರು

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...