ಹೆಸರಿನೊಳಗೇನಿದೆ?

ದರ್ಪ ಸೂಚನೆ ಸುಖದ ವಂಚನೆ
’ಮನು’ ಮನದ ಯಾತನೆ
ಜಾತಿ ಧರ್ಮ ಆಸ್ತಿ ಗೌರವ
ಕಾಣಲಾರವೆ ಹೆಸರೊಳಗೆ?

ಊರ ಗೌಡನ ಹೆಸರು
ಶೂದ್ರ ಸಿದ್ದನದೇನು?
ಗೌಡ ಕರೆದಂತೆ ಕರಿಸಿದ್ದನನ್ನು
ಕೂಗಬಹುದೇ ಹೊಲೆಯ ಗೌಡನನ್ನು?

ಇರಬಹುದು ಒಮ್ಮೊಮ್ಮೆ
ಹೆಸರೊಂದೆ ಈರ್ವರಿಗು
ಒಂದೇ ಮನೆಯಲಿ ಸಣ್ಣ ದೊಡ್ಡ
ಜಾತಿ ಮತಗಳ ನಡುವೆ ದೊಡ್ಡ ಗುಡ್ಡ

ಲಂಗೋಟಿ ಇರದವಗೂ
ಗೌಡನೆಂದೆ, ಸಾಮಿಯೆಂದೆ
ಧಣಿಯೆಂದೆ, ಸಾವ್ಕಾರನೆಂದೆ
ಹಾಗಲ್ಲದಿದ್ದರೆ ಅದು ಜಾತಿ ನಿಂದೆ!

ಒಲವಿತ್ತು ಬಲವಿತ್ತು
ಛಲವಿತ್ತು ಗೆಲುವಿತ್ತು
ಊರಾಚೆಯ ಕರಿಯನಿಂದೆ
ಕರೆದೆ ನೀ ನಿನ್ನದೇ ದೇವರ
’ಲೇ ಬಸ್ಯಾ, ಯಂಕ್ಯಾ, ರಾಗ್ಯಾ, ರಾಮ್ಯಾ…’
ವಕ್ರೋಕ್ರ ಪೆಕರ ಕಾಗೆ ಕರೆವಂತೆ

ಹೆಸರಿನಿಂದಲೆ ಧರ್ಮ
ಹೆಸರಿನಿಂದಲೆ ಕರ್ಮ
ಗೊತ್ತಿಲ್ಲ ಯಾರಿಗೆ ಇದರ ಮರ್ಮ?

ಅಕ್ಬರನೆಂದರೆ ಮುಸ್ಲಿಮನೆಂದೆ
ಆಚಾರಿಯೆಂದರೆ ಹಾರವನೆಂದೆ
ಡೇವಿಡ್ಡು ಆಂಥೋನಿ ಕ್ರಿಸ್ತನೆಂದೆ

ಎಂದಾದರು ಎಲ್ಲಾದರು
ಇಟ್ಟು ಕರೆದೆವೆ ಬೇರೆ ಹೆಸರು
ನಮ್ಮ ಮಕ್ಕಳಿಗೂ ಅದಲು ಬದಲು?

ಮರದ ತುಂಡು
ಕಲ್ಲು ಗುಂಡು
ಊರ ಹೊರಗಿನ ದೇವರು

ಮಾರಮ್ಮ ದುರುಗಮ್ಮ
ಸುಂಕ್ಲಮ್ಮ ಮರಿಗೆಮ್ಮ
ಎಷ್ಟು ಚಂದದ ಹೆಸರು
ಕುರಿ ಕೋಳಿ ಕ್ವಾಣ
ಉಳಿಸಿದ್ದು ಇವರ ನ್ಯಾಣ!

ಚಂದ ಚಂದದ ಮೂರ್ತಿ
ಜಗವ ತುಂಬಿದೆ ಕೀರ್ತಿ
ದೊಡ್ಡ ಮಂದಿಯ ದೇವರು
ಕೃಷ್ಣನಂತೆ ರಾಮನಂತೆ
ಎಲ್ಲಾ ಅವನ ಲೀಲೆಯಂತೆ
ಗೋವಿಂದಾ ಮಾಯೆ ನಿನ್ನ ಹೆಸರು!

ಜಾತಿ ಜಾತಿಗೂ ಒಬ್ಬ
ಧರ್ಮ ಧರ್ಮಕೂ ಮಬ್ಬ
ಸೃಷ್ಟಿಸಿದೆ ಬಲುಚತುರ ಮಾಯಕಾರ

ನಾಮ ನಾಮಗಳ ಹೊಸೆದು
ಒಂದೇ ದಾರದಿ ಬೆಸೆದು
ಜೀವ ಜೀವಕೆ ಜೀವಕೊಡುವುದ
ಬೇಕೆಂತಲೇ ಮರೆತ ಗೆಣೆಕಾರ!

ನಿನ್ನೆ ಮೊನ್ನೆಗಳಿಂದ ಕತ್ತಲೆ ಸೀಳಿ
ನಾಲ್ಕಕ್ಷರದ ಬೆಳಕು ಮೂಡಿ
ಉಟ್ಟ ವಸ್ತ್ರದ ಜೊತೆಗೇ
ಇಟ್ಟ ಹೆಸರುಗಳು ಬದಲಾಗಿ
ಸಂದಿದೆ ನಗರಜೀವನದ ಷೋಕಿ

ಹೆಸರಿನಲ್ಲೇನಿದೆ ಬರೀ ಹೆಸರು
ಲೋಕವಾದರೆ ತಾ ಒಂದೇ ಉಸಿರು

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮಿಸುವೆ ಈ ಚೋದ್ಯಕೆ
Next post ವೈಣಿಕ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys