ಹೆಸರಿನೊಳಗೇನಿದೆ?

ದರ್ಪ ಸೂಚನೆ ಸುಖದ ವಂಚನೆ
’ಮನು’ ಮನದ ಯಾತನೆ
ಜಾತಿ ಧರ್ಮ ಆಸ್ತಿ ಗೌರವ
ಕಾಣಲಾರವೆ ಹೆಸರೊಳಗೆ?

ಊರ ಗೌಡನ ಹೆಸರು
ಶೂದ್ರ ಸಿದ್ದನದೇನು?
ಗೌಡ ಕರೆದಂತೆ ಕರಿಸಿದ್ದನನ್ನು
ಕೂಗಬಹುದೇ ಹೊಲೆಯ ಗೌಡನನ್ನು?

ಇರಬಹುದು ಒಮ್ಮೊಮ್ಮೆ
ಹೆಸರೊಂದೆ ಈರ್ವರಿಗು
ಒಂದೇ ಮನೆಯಲಿ ಸಣ್ಣ ದೊಡ್ಡ
ಜಾತಿ ಮತಗಳ ನಡುವೆ ದೊಡ್ಡ ಗುಡ್ಡ

ಲಂಗೋಟಿ ಇರದವಗೂ
ಗೌಡನೆಂದೆ, ಸಾಮಿಯೆಂದೆ
ಧಣಿಯೆಂದೆ, ಸಾವ್ಕಾರನೆಂದೆ
ಹಾಗಲ್ಲದಿದ್ದರೆ ಅದು ಜಾತಿ ನಿಂದೆ!

ಒಲವಿತ್ತು ಬಲವಿತ್ತು
ಛಲವಿತ್ತು ಗೆಲುವಿತ್ತು
ಊರಾಚೆಯ ಕರಿಯನಿಂದೆ
ಕರೆದೆ ನೀ ನಿನ್ನದೇ ದೇವರ
’ಲೇ ಬಸ್ಯಾ, ಯಂಕ್ಯಾ, ರಾಗ್ಯಾ, ರಾಮ್ಯಾ…’
ವಕ್ರೋಕ್ರ ಪೆಕರ ಕಾಗೆ ಕರೆವಂತೆ

ಹೆಸರಿನಿಂದಲೆ ಧರ್ಮ
ಹೆಸರಿನಿಂದಲೆ ಕರ್ಮ
ಗೊತ್ತಿಲ್ಲ ಯಾರಿಗೆ ಇದರ ಮರ್ಮ?

ಅಕ್ಬರನೆಂದರೆ ಮುಸ್ಲಿಮನೆಂದೆ
ಆಚಾರಿಯೆಂದರೆ ಹಾರವನೆಂದೆ
ಡೇವಿಡ್ಡು ಆಂಥೋನಿ ಕ್ರಿಸ್ತನೆಂದೆ

ಎಂದಾದರು ಎಲ್ಲಾದರು
ಇಟ್ಟು ಕರೆದೆವೆ ಬೇರೆ ಹೆಸರು
ನಮ್ಮ ಮಕ್ಕಳಿಗೂ ಅದಲು ಬದಲು?

ಮರದ ತುಂಡು
ಕಲ್ಲು ಗುಂಡು
ಊರ ಹೊರಗಿನ ದೇವರು

ಮಾರಮ್ಮ ದುರುಗಮ್ಮ
ಸುಂಕ್ಲಮ್ಮ ಮರಿಗೆಮ್ಮ
ಎಷ್ಟು ಚಂದದ ಹೆಸರು
ಕುರಿ ಕೋಳಿ ಕ್ವಾಣ
ಉಳಿಸಿದ್ದು ಇವರ ನ್ಯಾಣ!

ಚಂದ ಚಂದದ ಮೂರ್ತಿ
ಜಗವ ತುಂಬಿದೆ ಕೀರ್ತಿ
ದೊಡ್ಡ ಮಂದಿಯ ದೇವರು
ಕೃಷ್ಣನಂತೆ ರಾಮನಂತೆ
ಎಲ್ಲಾ ಅವನ ಲೀಲೆಯಂತೆ
ಗೋವಿಂದಾ ಮಾಯೆ ನಿನ್ನ ಹೆಸರು!

ಜಾತಿ ಜಾತಿಗೂ ಒಬ್ಬ
ಧರ್ಮ ಧರ್ಮಕೂ ಮಬ್ಬ
ಸೃಷ್ಟಿಸಿದೆ ಬಲುಚತುರ ಮಾಯಕಾರ

ನಾಮ ನಾಮಗಳ ಹೊಸೆದು
ಒಂದೇ ದಾರದಿ ಬೆಸೆದು
ಜೀವ ಜೀವಕೆ ಜೀವಕೊಡುವುದ
ಬೇಕೆಂತಲೇ ಮರೆತ ಗೆಣೆಕಾರ!

ನಿನ್ನೆ ಮೊನ್ನೆಗಳಿಂದ ಕತ್ತಲೆ ಸೀಳಿ
ನಾಲ್ಕಕ್ಷರದ ಬೆಳಕು ಮೂಡಿ
ಉಟ್ಟ ವಸ್ತ್ರದ ಜೊತೆಗೇ
ಇಟ್ಟ ಹೆಸರುಗಳು ಬದಲಾಗಿ
ಸಂದಿದೆ ನಗರಜೀವನದ ಷೋಕಿ

ಹೆಸರಿನಲ್ಲೇನಿದೆ ಬರೀ ಹೆಸರು
ಲೋಕವಾದರೆ ತಾ ಒಂದೇ ಉಸಿರು

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮಿಸುವೆ ಈ ಚೋದ್ಯಕೆ
Next post ವೈಣಿಕ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…