ಅಮ್ಮ ಸುಟ್ಟ ರೊಟ್ಟಿ

ಅಮ್ಮ
ಬೆಳಗೆದ್ದು
ರೊಟ್ಟಿ ಸುಡುವದೆಂದರೆ
ನಮಗೆ ಪಂಚಪ್ರಾಣ

ಕತ್ತಲು ತುಂಬಿದ ಗುಡಿಸಲಿಗೆ
ಒಲೆಯ ಬೆಂಕಿಯೇ ಬೆಳಕು
ಸುಟ್ಟು ಸುಟ್ಟು ಕರ್‍ರಗಾದ
ಬಿಳಿ ಮೂರು ಕಲ್ಲು
ಮೇಲೊಂದು ಕರ್‍ರಾನೆ ಕರಿ ಹೆಂಚು
ಒಲೆಯೊಳಗೆ ಹಸಿ ಜಾಲಿ
ಮುಳ್ಳು ಕಟ್ಟಿಗೆ ಒಟ್ಟಿ
ಹೊಗೆಯೊಳಗೆ ಉಸಿರು ಕಟ್ಟಿ
ಮನೆಯೊಳಗೆ ಉಸಿರೆರೆದವಳು

ಅಮ್ಮ, ಕಾಲು ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕೊಣಿಗೆಯಲಿ ಹಿಟ್ಟರವಿ
ಆಸೆಯ ಒಡ್ಡು ಕಟ್ಟಿ
ಹಗಲೆಲ್ಲ ದುಡಿದ ಮೈ ಬಸಿದ ಬೆವರು
ಹದಕೆ ಕಾಯಿಸಿದ ಎಸರು
ಸುರುವಿ ಓರೊಟೊರಟ ಕೈಯಿಲೆ
ಮೆತ್ತ ಮೆತ್ತಗೆ ಕಲಸಿ
ಗಾಲಿಯಂಗೆ ಗುಂಡಗೆ ನಣ್ಣನೆಯ
ಮೂರ್ತಿ ಮಾಡಿದವಳು

ಅಮ್ಮ, ಕೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಎದೆಯ ತುಡಿತಗಳ ಬಡಿತ
ಹದವಾಗಿ ಮೆದುವಾಗಿ
ಲಯಬದ್ಧವಾಗಿ ಹಿಟ್ಟ
ತಟ್ಟಿದರೆ ದುಂಡ ದುಂಡಗೆ
ಹುಣ್ಣಿಮೆಯ ಚಂದಿರ
ಕಾದ ಕರಿಹೆಂಚಿನ ಮೇಲೆ
ಆಕಡೀಕಡೆ ಸುಟ್ಟು
ಹೊಟ್ಟೆಗಿಟ್ಟು
ರಟ್ಟೆಗೆ ಬಲವ ಕೊಟ್ಟವಳು

ಅಮ್ಮ, ಮೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಜೀವ ಜೀವದ ಸಾರ
ಕುಸಿವೆಣ್ಣೆ ಒಣಕಾರ
ಈರುಳ್ಳಿ ಹಸಿಮೆಣಸು
ಬೆಳ್ಳುಳ್ಳಿ ಉಂಚೆತೊಕ್ಕು
ದಿನಕೊಂದು ಹೊಸ ರುಚಿಯು
ರೊಟ್ಟಿಯೊಳಗೇ ಸುತ್ತಿ
ಉಣಬಡಿಸಿ
ಸುತ್ತೇಳು ಲೋಕವ ತೋರಿದವಳು

ಅಮ್ಮ. ಜೀವ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕಟ್ಟಿಗೆಯೊಟ್ಪಗೆ ಸುಟ್ಟು
ಹೊಗೆಯೊಳಗೇ ಕುದ್ದು
ಹೆಂಚಂತೆ ಕಾದು
ರೊಟ್ಟಿಯಾಗಿ ಬೆಂದ
ಒಲೆಯ ಮುಂದಿನ ಅಮ್ಮನ ಮುಖ
ನಿಗಿ ನಿಗಿ ಕೆಂಡ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕೆ ಹೀಗೆ ಬೀಸುತ್ತಿರಬೇಕು ಗಾಳಿ?
Next post ಬೆಳ್ದಿಂಗಳು

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys