Home / ಕವನ / ಕವಿತೆ / ಒಂದಾನೊಂದು ದಿನ

ಒಂದಾನೊಂದು ದಿನ

ಒಂದು ಸುಡುಬಿಸಿಲು ಮಧ್ಯಾಹ್ನ
ನನ್ನ ನೆರಳು ನಾನೇ
ನೋಡುತ್ತ ನಿಂತಿದ್ದೆ

ಅಂದು ಸಂತೆಯ ದಿನ
ಒಬ್ಬರ ಸುಳಿವಿಲ್ಲ

ನಿದ್ದೆ ಬಂದಂತಾಗಿ ಆಕಳಿಸಿದೆ
ನಾಯಿಯೊಂದು ಬಂದು
ಕಾಲೆತ್ತಿ
ಉಚ್ಚೆ ಒಯ್ದು ಹೋಯಿತು
ನನ್ನ ನೆರಳು ಸ್ವಲ್ಫ09
ಸರಿದಂತೆನಿಸಿತು

ನಿರ್ದಯಿ ಸೂರ್ಯ
ನನ್ನೊಳಗಿನಿಂದ
ಉದುರಿ ಬಿದ್ದಿದ್ದ
ಒಣಗಿದ ಎಲೆಗಳ ಮೇಲೆ
ಆಕ್ರಮಣಕ್ಕೆ ಪ್ರಯತ್ನಿಸುತ್ತಿದ್ದ

ಗಾಳಿ ಉಸಿರುಗಟ್ಟಿದಂತೆ
ಆಗೊಮ್ಮೆ ಈಗೊಮ್ಮೆ ಬಿಕ್ಕುತ್ತಿತ್ತು

ನನ್ನ ನೆರಳು
ದೂರ
ನನ್ನ ಬಿಟ್ಟು ಜಾರಿದಂತಿತ್ತು

ನೋಡುತ್ತಿರುವಂತೆ
ಒಬ್ಬ ಹುಡುಗ ಒಂದು ಹುಡುಗಿ
ನನ್ನತ್ತಲೇ ಬಂದು
ಒತ್ತಿಕೊಂಡು
ಕುಳಿತರು
ತುಂಬಾ ಹೊತ್ತು
ಮಾತನಾಡಿದರು
ನಡು ನಡುವೆ ಅತ್ತರು
ಎದ್ದು ಹೋಗುವಾಗ
ನಕ್ಕರು

ಕದ್ದು ಕದ್ದು ನೋಡುತ್ತಿದ್ದ
ಸೂರ್ಯ
ಸೀದಾ ಬಂದವನೆ ಕೇಳಿದ
’ಏನು ಮಾಡಿದೆ,
ಸಾಯಲೆಂದು ಬಂದವರು
ಬದುಕಲೆಂದು ಹಿಂದಿರುಗಿದರು?’

ಏನು ಹೇಳಲಿ?
ಹಸಿರೆಲೆಯನೊಮ್ಮೆ
ಬಿದ್ದ ಒಣ ಎಲೆಯನೊಮ್ಮೆ
ಪ್ರೀತಿಯಿಂದ
ದಿಟ್ಟಿಸಿ ನೋಡಿ
ನಕ್ಕೆ

ಗಾಳಿ ತೆಳ್ಳಗೆ ಬೀಸಲು ಶುರುವಿಟ್ಟಿತು
ನನ್ನ ನೆರಳು
ನಾಳಿನ ಬೆಳಗಿಗಾಗಿ ಕಾಯುತ್ತ
ಒಡಲೊಳಗೆ ಸೇರಿಬಿಟ್ಟಿತು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...