Home / ಕವನ / ಕವಿತೆ / ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ
ತ್ರಾಹಿ ಎನುತ ಪಾದಕೆರಗಿದ ಜನರಿಗೆ
ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ
ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ||

ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ
ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತುತಿ
ಬಾರಿ ಬಾರಿಗೂ ನುತಿಪ ಭಕುತರ ಮಾರುತಿ
ವಜ್ರ ಶರೀರ ನಿರಾಮಯ ವೀರ ನರನ ಧ್ವಜ ಸಾರಥಿ
ಮೀರಿದ ಉಗ್ರ ಅವತಾರದಿ ಪೂರ್ಣ
ವಾರಿಧಿಯೊಳು ಘನ ಸಾರವ ನಿರ್ಮಿಸಿ
ಧರಣಿಯಾತ್ಮಜ ಇದ್ದ ವನವನು ಸೇರುತ
ಹಾರಿ ಮುದ್ರಿಕೆಯ ತೋರಿದ ಮಾರುತಿ ||೧||

ಕುಸುಮಶರಪಿತನುಸುರಿದ ನುಡಿಯನು ಲಾಲಿಸಿ
ಮುಸುಕಿದ ಅಸುರರ ಪಡೆಯನಾವರಿಸಿ ಬಲವನು ತೋರಿಸಿ
ಅಸಮನು ಶಕ್ತಿಲೆ ಕುಂಭಕರ್ಣನನು ಸೋಲಿಸಿ ಲಂಕಾದೇಶಗೆಡಿಸಿದಿ
ವಾಲಾಗ್ರದ ಕೊನೆಯ ಜ್ವಲನದಿ ದಶಶಿರನಾಥನ ಮರ್ದಿಸಿ
ವಸುಧೆಯಾಳು ಹೊಸಪಟ್ಟ ವಿಭೀಷಣ ಶರಣಿಗೆ ನೀ-
ನತಿಶಯದಲಿ ಪಾಲಿಸಿದಿ ಪರಾತ್ಪರ ಹಸುಳನಾಗಿ ಹರಿಚರಣಕೆರಗಿದಿ ||೨||

ಮಂದಹಾಸ ಆನಂದಯೋಗ ದುರಂಧತಾ ಕರುಣಿಸು ಇಂದು
ಮುನೀಂದ್ರ ಮೌನವ್ರತ ಮಂತ್ರದಲಿ ಬಂಧುರ
ಇಂದ್ರಜಿತುಹರ ಚಂದ್ರರೂಪದಲಿ ಚಂದಿರಾ
ಅಂಜನಿ ಕಂದಾ ಮಣಿಯಮುಕುಟದಿ ಶೋಭಿಸುವ ಸುಂದರಾ
ಇಂದು ನಿಮ್ಮಯ ಪಾದಾರವಿಂದಗಳಿಗೆ ಕರ-
ಹೊಂದಿಸೆನ್ನ ಮನಮಂದಿರದೊಳು ಮುದದಿಂದ ಪೇಳೆ
ಗೋವಿಂದರಾಜ ಗುರುವಿಂದ ಪಡೆದ ಉಪದೇಶ ಬಲದಿ ನುತಿಪೆ ||೩||
* * * *

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...