Home / ಕವನ / ಕವಿತೆ / ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ
ತ್ರಾಹಿ ಎನುತ ಪಾದಕೆರಗಿದ ಜನರಿಗೆ
ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ
ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ||

ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ
ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತುತಿ
ಬಾರಿ ಬಾರಿಗೂ ನುತಿಪ ಭಕುತರ ಮಾರುತಿ
ವಜ್ರ ಶರೀರ ನಿರಾಮಯ ವೀರ ನರನ ಧ್ವಜ ಸಾರಥಿ
ಮೀರಿದ ಉಗ್ರ ಅವತಾರದಿ ಪೂರ್ಣ
ವಾರಿಧಿಯೊಳು ಘನ ಸಾರವ ನಿರ್ಮಿಸಿ
ಧರಣಿಯಾತ್ಮಜ ಇದ್ದ ವನವನು ಸೇರುತ
ಹಾರಿ ಮುದ್ರಿಕೆಯ ತೋರಿದ ಮಾರುತಿ ||೧||

ಕುಸುಮಶರಪಿತನುಸುರಿದ ನುಡಿಯನು ಲಾಲಿಸಿ
ಮುಸುಕಿದ ಅಸುರರ ಪಡೆಯನಾವರಿಸಿ ಬಲವನು ತೋರಿಸಿ
ಅಸಮನು ಶಕ್ತಿಲೆ ಕುಂಭಕರ್ಣನನು ಸೋಲಿಸಿ ಲಂಕಾದೇಶಗೆಡಿಸಿದಿ
ವಾಲಾಗ್ರದ ಕೊನೆಯ ಜ್ವಲನದಿ ದಶಶಿರನಾಥನ ಮರ್ದಿಸಿ
ವಸುಧೆಯಾಳು ಹೊಸಪಟ್ಟ ವಿಭೀಷಣ ಶರಣಿಗೆ ನೀ-
ನತಿಶಯದಲಿ ಪಾಲಿಸಿದಿ ಪರಾತ್ಪರ ಹಸುಳನಾಗಿ ಹರಿಚರಣಕೆರಗಿದಿ ||೨||

ಮಂದಹಾಸ ಆನಂದಯೋಗ ದುರಂಧತಾ ಕರುಣಿಸು ಇಂದು
ಮುನೀಂದ್ರ ಮೌನವ್ರತ ಮಂತ್ರದಲಿ ಬಂಧುರ
ಇಂದ್ರಜಿತುಹರ ಚಂದ್ರರೂಪದಲಿ ಚಂದಿರಾ
ಅಂಜನಿ ಕಂದಾ ಮಣಿಯಮುಕುಟದಿ ಶೋಭಿಸುವ ಸುಂದರಾ
ಇಂದು ನಿಮ್ಮಯ ಪಾದಾರವಿಂದಗಳಿಗೆ ಕರ-
ಹೊಂದಿಸೆನ್ನ ಮನಮಂದಿರದೊಳು ಮುದದಿಂದ ಪೇಳೆ
ಗೋವಿಂದರಾಜ ಗುರುವಿಂದ ಪಡೆದ ಉಪದೇಶ ಬಲದಿ ನುತಿಪೆ ||೩||
* * * *

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...