Home / ಕವನ / ಕವಿತೆ / ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ
ತ್ರಾಹಿ ಎನುತ ಪಾದಕೆರಗಿದ ಜನರಿಗೆ
ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ
ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ||

ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ
ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತುತಿ
ಬಾರಿ ಬಾರಿಗೂ ನುತಿಪ ಭಕುತರ ಮಾರುತಿ
ವಜ್ರ ಶರೀರ ನಿರಾಮಯ ವೀರ ನರನ ಧ್ವಜ ಸಾರಥಿ
ಮೀರಿದ ಉಗ್ರ ಅವತಾರದಿ ಪೂರ್ಣ
ವಾರಿಧಿಯೊಳು ಘನ ಸಾರವ ನಿರ್ಮಿಸಿ
ಧರಣಿಯಾತ್ಮಜ ಇದ್ದ ವನವನು ಸೇರುತ
ಹಾರಿ ಮುದ್ರಿಕೆಯ ತೋರಿದ ಮಾರುತಿ ||೧||

ಕುಸುಮಶರಪಿತನುಸುರಿದ ನುಡಿಯನು ಲಾಲಿಸಿ
ಮುಸುಕಿದ ಅಸುರರ ಪಡೆಯನಾವರಿಸಿ ಬಲವನು ತೋರಿಸಿ
ಅಸಮನು ಶಕ್ತಿಲೆ ಕುಂಭಕರ್ಣನನು ಸೋಲಿಸಿ ಲಂಕಾದೇಶಗೆಡಿಸಿದಿ
ವಾಲಾಗ್ರದ ಕೊನೆಯ ಜ್ವಲನದಿ ದಶಶಿರನಾಥನ ಮರ್ದಿಸಿ
ವಸುಧೆಯಾಳು ಹೊಸಪಟ್ಟ ವಿಭೀಷಣ ಶರಣಿಗೆ ನೀ-
ನತಿಶಯದಲಿ ಪಾಲಿಸಿದಿ ಪರಾತ್ಪರ ಹಸುಳನಾಗಿ ಹರಿಚರಣಕೆರಗಿದಿ ||೨||

ಮಂದಹಾಸ ಆನಂದಯೋಗ ದುರಂಧತಾ ಕರುಣಿಸು ಇಂದು
ಮುನೀಂದ್ರ ಮೌನವ್ರತ ಮಂತ್ರದಲಿ ಬಂಧುರ
ಇಂದ್ರಜಿತುಹರ ಚಂದ್ರರೂಪದಲಿ ಚಂದಿರಾ
ಅಂಜನಿ ಕಂದಾ ಮಣಿಯಮುಕುಟದಿ ಶೋಭಿಸುವ ಸುಂದರಾ
ಇಂದು ನಿಮ್ಮಯ ಪಾದಾರವಿಂದಗಳಿಗೆ ಕರ-
ಹೊಂದಿಸೆನ್ನ ಮನಮಂದಿರದೊಳು ಮುದದಿಂದ ಪೇಳೆ
ಗೋವಿಂದರಾಜ ಗುರುವಿಂದ ಪಡೆದ ಉಪದೇಶ ಬಲದಿ ನುತಿಪೆ ||೩||
* * * *

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...