ಪಾಹಿ ಪರಮದಯಾಳು ಕೃಪಾಕರ

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ
ತ್ರಾಹಿ ಎನುತ ಪಾದಕೆರಗಿದ ಜನರಿಗೆ
ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ
ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ||

ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ
ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತುತಿ
ಬಾರಿ ಬಾರಿಗೂ ನುತಿಪ ಭಕುತರ ಮಾರುತಿ
ವಜ್ರ ಶರೀರ ನಿರಾಮಯ ವೀರ ನರನ ಧ್ವಜ ಸಾರಥಿ
ಮೀರಿದ ಉಗ್ರ ಅವತಾರದಿ ಪೂರ್ಣ
ವಾರಿಧಿಯೊಳು ಘನ ಸಾರವ ನಿರ್ಮಿಸಿ
ಧರಣಿಯಾತ್ಮಜ ಇದ್ದ ವನವನು ಸೇರುತ
ಹಾರಿ ಮುದ್ರಿಕೆಯ ತೋರಿದ ಮಾರುತಿ ||೧||

ಕುಸುಮಶರಪಿತನುಸುರಿದ ನುಡಿಯನು ಲಾಲಿಸಿ
ಮುಸುಕಿದ ಅಸುರರ ಪಡೆಯನಾವರಿಸಿ ಬಲವನು ತೋರಿಸಿ
ಅಸಮನು ಶಕ್ತಿಲೆ ಕುಂಭಕರ್ಣನನು ಸೋಲಿಸಿ ಲಂಕಾದೇಶಗೆಡಿಸಿದಿ
ವಾಲಾಗ್ರದ ಕೊನೆಯ ಜ್ವಲನದಿ ದಶಶಿರನಾಥನ ಮರ್ದಿಸಿ
ವಸುಧೆಯಾಳು ಹೊಸಪಟ್ಟ ವಿಭೀಷಣ ಶರಣಿಗೆ ನೀ-
ನತಿಶಯದಲಿ ಪಾಲಿಸಿದಿ ಪರಾತ್ಪರ ಹಸುಳನಾಗಿ ಹರಿಚರಣಕೆರಗಿದಿ ||೨||

ಮಂದಹಾಸ ಆನಂದಯೋಗ ದುರಂಧತಾ ಕರುಣಿಸು ಇಂದು
ಮುನೀಂದ್ರ ಮೌನವ್ರತ ಮಂತ್ರದಲಿ ಬಂಧುರ
ಇಂದ್ರಜಿತುಹರ ಚಂದ್ರರೂಪದಲಿ ಚಂದಿರಾ
ಅಂಜನಿ ಕಂದಾ ಮಣಿಯಮುಕುಟದಿ ಶೋಭಿಸುವ ಸುಂದರಾ
ಇಂದು ನಿಮ್ಮಯ ಪಾದಾರವಿಂದಗಳಿಗೆ ಕರ-
ಹೊಂದಿಸೆನ್ನ ಮನಮಂದಿರದೊಳು ಮುದದಿಂದ ಪೇಳೆ
ಗೋವಿಂದರಾಜ ಗುರುವಿಂದ ಪಡೆದ ಉಪದೇಶ ಬಲದಿ ನುತಿಪೆ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮ ರಾವೇಣ ಹರಿ
Next post ನಾ ನಿನ್ನ ಮಗ ನಗಗೇಡು ಮಾಡಬ್ಯಾಡ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…