ಮಲ್ಲಿಗೆಯ ಮೊಗ್ಗುಗಳ ರಾಸಿ

(ಹುಡುಗಿಯರ ನಗು ಕೇಳಿ ಬರೆದುದು)

ಮಲ್ಲಿಗೆಯ ಮೊಗ್ಗುಗಳ ರಾಸಿ ಅರಳಿರಲದರ
ನಡುವೆ ಅರೆ ಎಚ್ಚರದಿ ಇರವನೇ ಅರೆಮರೆತು
ಕಂಪಿನಿಂದಾತ್ಮವನು, ಹೃದಯವನು, ತುಂಬಿಸುತ
ಬೇರೊಂದು ವಿಶ್ವವನೆ ಸೇರಿದಂತಾಗುವುದು
ನಿಮ್ಮ ಕಿಲಕಿಲ ನಗುವು ದೂರದಿಂ ಗಾಳಿಯಲಿ
ತುಂಬಿ ತೂರುತ ನನ್ನ ಹೃದಯದೆಡೆ ಸಾಗಿರಲು.
ವೀಣೆಯಿಂ ಹೊರಹೊಮ್ಮಿ ಗಾನ ತುಳುಕಾಡುತಲಿ
ಜಗದ ಮೈಮರೆಸುವೊಲು, ರಕ್ತ ನುಡಿಸುತಲಿಹುದು!

ನಗುವಂತು ಬಲು ಸೊಗಸು-ಮನವನೇ ಮರೆಸುವುದು!
ಮುನಿಸು ಮನದಲಿ ಕುಳಿತು ಮುಗುಳು ಮೊಗ್ಗಾದಂತೆ
ಕಂಗಳಲಿ ಬೇರೊಂದು ಬಗೆಯ ಬೆಳಕೇ ಹೊಳೆದು
ಎನ್ನೆದೆಯ ಸೆಳೆಯುವುದು ಒಮ್ಮೆಗೇ ನಿಮ್ಮೆಡೆಗೆ!
ನಗುವಿನಲಿ ನಿಮ್ಮ ಮುಖ ಹಗಲ ಮುಗಿಲಿನ ಹಾಗೆ!
ಮುನಿಸಿನಲಿ ಮಿಗಿಲು ಸೊಗ-ಸಂಜೆ ಮೋಡದ ಹಾಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳಿಕೆ
Next post ನಸುಕಿನ ಮಳೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…