ಸೌಂದರ್ಯಕ್ಕೆ

ನೆರಳನರಸುವ ಕೂಸು ತನ್ನ ಎಳೆ ಕೈಗಳಲಿ
ಅದ ಹಿಡಿದು ತನ್ನೊಡನೆ ಆಟಕುಪಯೋಗಿಸುವ
ಎಳೆ ಚಪಲಕೀಡಾಗಿ-ಹಿಗ್ಗಿನಲಿ ಓಡುತಲಿ
ಅದರೆಡೆಗೆ ನಡೆದಾಗ, ನೆರಳು ಕೈಗಳ ಹಿಡಿತ
ತಪ್ಪಿಸುತ ಜಾರಿರಲು, ಕಣ್ಣೀರ ಕರೆಯುತ್ತ
ತಾಯ ಮಡಿಲಲಿ ತನ್ನ ದುಗುಡ ಹರಿಸುವ ಹಾಗೆ,
ಸಂತಸದ ನೆರಳರಸಿ, ಒಲವಿನೆದೆ ಬಯಸುತ್ತ,
-ಕಣ್ಣೆವೆಯ ಮುಚ್ಚದಿಹ ಮುಗಿಲ ತಾರೆಯ ಹಾಗೆ
ಬಾಳದುಸ್ವಪ್ನಗಳ ಅಲೆಗಳಲಿ ಸಿಕ್ಕುತಲಿ
ಹೃದಯದೊಲವಾಸೆಗಳು ಚೂರು ಚೂರಾಗುವುದ
ಕಂಡು ಕಣ್ಣೀರ್ಗರೆದು, ಕಾವಿನಲಿ, ನೋವಿನಲಿ,
ನಿನ್ನೆಡೆಗೆ ಸಾಗುತಿಹೆ! ಮೈಮರೆಪ ಮಧುಭರಿತ
ನಿನ್ನೆದೆಯ ದಳಗಳಲಿ ನನ್ನಾತ್ಮ ಸಂತವಿಸಿ
ನೋವನಳಿಪುದು ಗೆಳತಿ-ಉಳಿದೆಲ್ಲ ಅಳಿದಿರಲಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳಗದಿರುವುದೇ
Next post ಮಳೆ ಎಂದರೆ ಪ್ರೀತಿ ನನಗೆ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys