ಸೌಂದರ್ಯಕ್ಕೆ

ನೆರಳನರಸುವ ಕೂಸು ತನ್ನ ಎಳೆ ಕೈಗಳಲಿ
ಅದ ಹಿಡಿದು ತನ್ನೊಡನೆ ಆಟಕುಪಯೋಗಿಸುವ
ಎಳೆ ಚಪಲಕೀಡಾಗಿ-ಹಿಗ್ಗಿನಲಿ ಓಡುತಲಿ
ಅದರೆಡೆಗೆ ನಡೆದಾಗ, ನೆರಳು ಕೈಗಳ ಹಿಡಿತ
ತಪ್ಪಿಸುತ ಜಾರಿರಲು, ಕಣ್ಣೀರ ಕರೆಯುತ್ತ
ತಾಯ ಮಡಿಲಲಿ ತನ್ನ ದುಗುಡ ಹರಿಸುವ ಹಾಗೆ,
ಸಂತಸದ ನೆರಳರಸಿ, ಒಲವಿನೆದೆ ಬಯಸುತ್ತ,
-ಕಣ್ಣೆವೆಯ ಮುಚ್ಚದಿಹ ಮುಗಿಲ ತಾರೆಯ ಹಾಗೆ
ಬಾಳದುಸ್ವಪ್ನಗಳ ಅಲೆಗಳಲಿ ಸಿಕ್ಕುತಲಿ
ಹೃದಯದೊಲವಾಸೆಗಳು ಚೂರು ಚೂರಾಗುವುದ
ಕಂಡು ಕಣ್ಣೀರ್ಗರೆದು, ಕಾವಿನಲಿ, ನೋವಿನಲಿ,
ನಿನ್ನೆಡೆಗೆ ಸಾಗುತಿಹೆ! ಮೈಮರೆಪ ಮಧುಭರಿತ
ನಿನ್ನೆದೆಯ ದಳಗಳಲಿ ನನ್ನಾತ್ಮ ಸಂತವಿಸಿ
ನೋವನಳಿಪುದು ಗೆಳತಿ-ಉಳಿದೆಲ್ಲ ಅಳಿದಿರಲಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳಗದಿರುವುದೇ
Next post ಮಳೆ ಎಂದರೆ ಪ್ರೀತಿ ನನಗೆ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…