Home / ಕವನ / ಕವಿತೆ / ರಾಮಚಂದ್ರ ಶರ್ಮರೇ (ರ್‍)

ರಾಮಚಂದ್ರ ಶರ್ಮರೇ (ರ್‍)

ಶ್ರೀರಾಮಚಂದ್ರ ಹುಟ್ಟಿದ ದಿನವೇ
ಡೋಂಟ್ ಕೇರ್‍ ಅಂತ ನೀವೇ ಫೇರ್‌ವೆಲ್
ಏರ್ಪಾಡು ಮಾಡುಕೊಂಡಿದ್ದು ನೋ ಒನ್ ವಾಸ್ ಅವೇರ್‍
ನಮಗಾರಿಗೂ ಗೊತ್ತೇ ಮಾಡದಂತೆ ಹೊರಟು ಬಿಟ್ಟಿದ್ದು
ವಾಸ್ ಇನ್ ಎ ವೇ ಅನ್‌ಫೇರ್‍

ನಿಮ್ಮ ಪಾಂಡಿತ್ಯ ನೀವು ಕನ್ನಡ ಕಾವ್ಯಕ್ಕೆ ಕಲ್ಪಿಸಿದ ಕಾಯಕಲ್ಪ
ಓದಿ, ಕೇಳೀ ಅರ್ಥಮಾಡಿಕೊಂಡಿದ್ದೇನೆ ಅಲ್ಪಸ್ವಲ್ಪ
ಜೊಳ್ಳು ಕವನಗಳ ಬಗ್ಗೆ ನಿಮ್ಮ ಜಿಗುಪ್ಸೆ
ಪೊಳ್ಳು ಕವನಗಳ ಕ್ಯಾಸೆಟ್ಟು ಬಗ್ಗೆ ಕೆಟ್ಟ ಸಿಟ್ಟು

ಬೊಗಳೆಗಳ ಜತೆ ನಿಮ್ಮ ಜಗಳ
ನೇರನುಡಿ, ಹಾಸ್ಯ, ಪರಿಹಾಸ್ಯ
ಜಂಟಲ್‌ಮಾನ್ ಪದದ ಅರ್ಥ ವಿವರಣೆಯಂತಿದ್ದ ವ್ಯಕ್ತಿ
ಇವೆಲ್ಲವೂ ಅರ್ಥವಾಗಿದ್ದವು ಬಿಡಿ ಯತಾನುಶಕ್ತಿ
ಆದರೆ ಕಡೆವರೆಗೂ ಅರ್ಥವಾಗದುಳಿದ ಅಚ್ಚರಿಯಂದರೆ
ಎಂಥ ಕೋಪ, ವಿಕೋಪಗಳ ಮದ್ಯದಲ್ಲೂ ಎದುರಾಳಿಗಳನ್ನು
ನಿರಾಯುಧರನ್ನಾಗಿಸಿ ದಿಡೀರ್‍ ಎಂದು
ನಿಮ್ಮ ಮುಖದಲ್ಲಿ ನಿರಪೇಕ್ಷವಾಗಿ ಮೂಡಿ ಬಿಡುತ್ತಿದ್ದ
ಬಿದಿಗೆ ಚಂದ್ರಮನ ಮಗು ಮುಖದ ಗಾಂಧಿನಗು.
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...