ದೇವ ನೀನೈತಂದೆ

ನನ್ನೆದೆಯ ಬಾಗಿಲನು ಮುಚ್ಚಿ ನಿದ್ರಿಸುತಿದ್ದೆ
ಜೀವನದಿ ತಿರುಳಿಲ್ಲವೆಂಬ ಭ್ರಮೆಯೊಳಗೆ
ದೇವ ನೀನೈತಂದು ಬಾಗಿಲನು ಬಡಿಯೆ ನಾ
ಸಿಡುಕಿನಿಂದಲೇ ಕೇಳ್ದೆ “ಯಾರು ಅದು” ಎಂದು!   ೧

ಮೌನದಲಿ ಮತ್ತೊಮ್ಮೆ ಶಬ್ದ ಮಾಡಲು ನೀನು
ನಾನೆದ್ದೆ ಕೋಪದಲಿ ಕೆಂಡದಂತಾಗಿ
“ಯಾರಿವನು-ನಿದ್ರೆಯಲಿ ಭಂಗ ತಂದಿಹ ಧೂರ್ತ”
ಎನುತ ಚಿಂತಿಸಿ ಬಂದು ಬಾಗಿಲನು ತೆರೆದೆ!   ೨

ನಿನ್ನ ನೋಡುತಲೆನ್ನ ಕೋಪ ಕಣ್ಣೀರಾಯ್ತು,
ನಿನ್ನ ಮುಗುಳ್ನಗೆ ಮಿಂಚಿ ನನ್ನ ಮನ ಸೆಳೆಯೆ
ಮೌನದಲಿ ಹೃದಯದಲಿ ತಳಮಳದಿ ತಪಿಸಿದೆನು
ನೀನೊಳಗೆ ಬರಬೇಕು ಎಂಬುದೆನ್ನಿಚ್ಫೆ!   ೩

ನಸುನಕ್ಕು ಚಣಕಾಲ ಒಳಗೆ ದಿಟ್ಟಿಸಿ ನೋಡಿ
ಮುಂದೆ ಸಾಗಿದೆ ನೀನು ಹೃದಯದೊಲವೆ
ನಿನ್ನ ಪುರಾಗಮನಕಾಗಿ ಕಾಯುತಲಿರುವೆ
ಎದೆಯ ಬಾಗಿಲ ತೆರೆದು ಹೊಸ್ತಿಲಲಿ ನಿಂದು!   ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರಹವೆಂಬ ಮುತ್ತು
Next post ಬಸನಿಂಗನ ಮಾತು ಕೇಳಿ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…