ಜಯವಾಗಲಿ ಇಳೆಗೆಲ್ಲ ಜಯ

ಸ್ವತಂತ್ರ ಭಾರತದರುಣೋದಯದ
ಮುಂಗಿರಣವದೋ ಮೂಡುತಿದೆ;
ಶತಮಾನದ ಮೇಲಿನ ಕಡು ದಾಸ್ಯದ
ಭಂಗಗೈದ ತಮವೋಡುತಿದೆ.

ಸ್ವಾತಂತ್ರ್‍ಯದ ಹರಿಕಾರರು ಮಲಗಿದ
ಜನರನೆಚ್ಚರಿಸ ಬಂದಿಹರು;
ಚಾತಕದೊಲು ಬಾಯ್ ಬಿಡುತಿಹ ಜನಕೆ
ಒಸಗೆ ಭರವಸೆಯ ತಂದಿಹರು.

ಇನ್ನೂ ಮಲಗಿರಲೇನು ಚೆಂದ? ಮೈ
ಜಡತೆಯ ಕೊಡಹುತ ಎದ್ದೇಳಿ;
ತನ್ನ ಪಾಲಿಗಿಹ ನಾಡಿನ ಸೇವೆಯ
ಭಾಗವ ಸಲಿಸುವ ಮನ ತಾಳಿ.

ಯಾರೋ ಬಿಡುಗಡೆ ನೀಡುವರೆಂದು
ಬೇಡುತಲಿರೆ ಎಂದಿಗೆ ಮುಕುತಿ?
ಸಾರಿಬರುವುದು ತಾನೇ ಬಿಡುಗಡೆ
ಹೂಡಲೆಮ್ಮ ಆತ್ಮದ ಶಕುತಿ.

ಇಂದಿನ ಜಯ ಹೊರಶಕ್ತಿಯ ಹುಸಿಜಯ
ಹಿಂಗಲಿಲ್ಲ ಲೋಕದೊಳು ಭಯ;
ಮುಂದೆ ಭಾರತವು ತೋರುವ ಆತ್ಮದ
ಜಯವಾಗಲಿ ಇಳೆಗೆಲ್ಲ ಜಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಟ್ಟೆಷ್ಟಾಯಿತು ಕವಿತೆ?
Next post ಬಾಲ್ಬಸ್ವವ್ರು

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…