ಜಯವಾಗಲಿ ಇಳೆಗೆಲ್ಲ ಜಯ

ಸ್ವತಂತ್ರ ಭಾರತದರುಣೋದಯದ
ಮುಂಗಿರಣವದೋ ಮೂಡುತಿದೆ;
ಶತಮಾನದ ಮೇಲಿನ ಕಡು ದಾಸ್ಯದ
ಭಂಗಗೈದ ತಮವೋಡುತಿದೆ.

ಸ್ವಾತಂತ್ರ್‍ಯದ ಹರಿಕಾರರು ಮಲಗಿದ
ಜನರನೆಚ್ಚರಿಸ ಬಂದಿಹರು;
ಚಾತಕದೊಲು ಬಾಯ್ ಬಿಡುತಿಹ ಜನಕೆ
ಒಸಗೆ ಭರವಸೆಯ ತಂದಿಹರು.

ಇನ್ನೂ ಮಲಗಿರಲೇನು ಚೆಂದ? ಮೈ
ಜಡತೆಯ ಕೊಡಹುತ ಎದ್ದೇಳಿ;
ತನ್ನ ಪಾಲಿಗಿಹ ನಾಡಿನ ಸೇವೆಯ
ಭಾಗವ ಸಲಿಸುವ ಮನ ತಾಳಿ.

ಯಾರೋ ಬಿಡುಗಡೆ ನೀಡುವರೆಂದು
ಬೇಡುತಲಿರೆ ಎಂದಿಗೆ ಮುಕುತಿ?
ಸಾರಿಬರುವುದು ತಾನೇ ಬಿಡುಗಡೆ
ಹೂಡಲೆಮ್ಮ ಆತ್ಮದ ಶಕುತಿ.

ಇಂದಿನ ಜಯ ಹೊರಶಕ್ತಿಯ ಹುಸಿಜಯ
ಹಿಂಗಲಿಲ್ಲ ಲೋಕದೊಳು ಭಯ;
ಮುಂದೆ ಭಾರತವು ತೋರುವ ಆತ್ಮದ
ಜಯವಾಗಲಿ ಇಳೆಗೆಲ್ಲ ಜಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಟ್ಟೆಷ್ಟಾಯಿತು ಕವಿತೆ?
Next post ಬಾಲ್ಬಸ್ವವ್ರು

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys