ಜಯವಾಗಲಿ ಇಳೆಗೆಲ್ಲ ಜಯ

ಸ್ವತಂತ್ರ ಭಾರತದರುಣೋದಯದ
ಮುಂಗಿರಣವದೋ ಮೂಡುತಿದೆ;
ಶತಮಾನದ ಮೇಲಿನ ಕಡು ದಾಸ್ಯದ
ಭಂಗಗೈದ ತಮವೋಡುತಿದೆ.

ಸ್ವಾತಂತ್ರ್‍ಯದ ಹರಿಕಾರರು ಮಲಗಿದ
ಜನರನೆಚ್ಚರಿಸ ಬಂದಿಹರು;
ಚಾತಕದೊಲು ಬಾಯ್ ಬಿಡುತಿಹ ಜನಕೆ
ಒಸಗೆ ಭರವಸೆಯ ತಂದಿಹರು.

ಇನ್ನೂ ಮಲಗಿರಲೇನು ಚೆಂದ? ಮೈ
ಜಡತೆಯ ಕೊಡಹುತ ಎದ್ದೇಳಿ;
ತನ್ನ ಪಾಲಿಗಿಹ ನಾಡಿನ ಸೇವೆಯ
ಭಾಗವ ಸಲಿಸುವ ಮನ ತಾಳಿ.

ಯಾರೋ ಬಿಡುಗಡೆ ನೀಡುವರೆಂದು
ಬೇಡುತಲಿರೆ ಎಂದಿಗೆ ಮುಕುತಿ?
ಸಾರಿಬರುವುದು ತಾನೇ ಬಿಡುಗಡೆ
ಹೂಡಲೆಮ್ಮ ಆತ್ಮದ ಶಕುತಿ.

ಇಂದಿನ ಜಯ ಹೊರಶಕ್ತಿಯ ಹುಸಿಜಯ
ಹಿಂಗಲಿಲ್ಲ ಲೋಕದೊಳು ಭಯ;
ಮುಂದೆ ಭಾರತವು ತೋರುವ ಆತ್ಮದ
ಜಯವಾಗಲಿ ಇಳೆಗೆಲ್ಲ ಜಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಟ್ಟೆಷ್ಟಾಯಿತು ಕವಿತೆ?
Next post ಬಾಲ್ಬಸ್ವವ್ರು

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…