Home / ಕವನ / ಕವಿತೆ / ಅಣುಶಕ್ತಿ

ಅಣುಶಕ್ತಿ

ಅಂದು – ಋಷಿಗಳ್ ಯೋಗಿಗಳ ಪರಮ ದಾರ್ಶನಿಕರ್‍
ಭಕ್ತರ್‍ ವಿರಕ್ತರ್‍ ಕೀವಂದ್ರರ್‍
ದಿವ್ಯಚಕ್ಷುನಿನಿಂ
ಅಣುವನೊಡೆದರ್‍
ಕಂಡರದ್ಭುತಮಂ,
ಪೂರ್ಣ ದರ್ಶನಮಂ:
ವ್ಯೋಮ ಭೂಮಿಗಳೊಳ್

ರವಿಯಾಗಿ ಶಶಿಯಾಗಿ ತಾರಾನಿಕರಮಾಗಿ
ಸಿಡಿಲಾಗಿ ಮಿಂಚಾಗಿ ವೃಷ್ಟಿಯೆನಿಸಿ
ಕಡಲಾಗಿ ಭೂಮಿಯೊಡಲಾಗಿ
ತಾನ್ ಸರ್ವ ಸೃಷ್ಟಿಯೆನಿಸಿ
ಮೆರೆವ
ಪರಮ ತೇಜಸ್ವಿಯನ್
ಅಣುವಿಗಣುವಾದನನ್
ಮಹತೋಮಹೀಯನನ್
ಸರ್ವಶಕ್ತನನ್
ಸರ್ವಕಾರಣನನ್
ಪರಮಾತ್ಮನನ್
ಲೋಕತಾರಕನನ್.

ಇಂದು – ಹಿರಿ ವಿಜ್ಞಾನಿಗಳ್ ಪರಮ ಶಕ್ತರ್‍
ಪ್ರತ್ಯಕ್ಷತಾ ತತ್ವದತಿವೀರ ಭಕ್ತರ್‍
ಯಂತ್ರ ಚಕ್ಷುವಿನಿಂ
ಅಣುವನೊಡೆದರ್‍
ಜಗದ
ಕಟ್ಟನೊಡೆದರ್‍:
ಒಡೆದು
ಕಂಡರದ್ಭುತಮಂ,
ಖಂಡ ದರ್ಶನಮಂ:
ವ್ಯೋಮ ಜನ ಭುವಿಗಳೊಳ್
ರವಿ ಶಶಿಗಳಂ ನೊಣೆವ ರಾಹು ಸಮನಾಗಿ
ತಾರೆಗಳ ಮುಕ್ಕುಳಿಪ ತಮದ ರಕ್ಕಸನೆನಿಸಿ
ಸಿಡಿಲಾಗಿ ಸಿಡಿದು ಸೀಳ್ ಮಿಂಚಾಗಿ ಇಳಿದು
ಸುರಿದಗ್ನಿವೃಷ್ಟಿಯಾಗಿ
ಕಡಲನೇ ಕುಡಿದು ನೆಲಮೆಲ್ಲಮನ್ ಒಡೆದು
ಸೃಷ್ಟಿಸರ್ವಸ್ವಮಂ ಬಿಡದೆ ತೊಡೆದು
ಅತಿ ರೌದ್ರದೆಸಕದಿಂ
ಉರಿದು ಮಾಮಸಕದಿಂ
ಪ್ರಲಯ ರುದ್ರಂ ತಾನೆ ಎನಿಸಿ
ಮೆರೆವ
ಪರಮ ಪ್ರಕಾಶಮಂ
ಸೃಷ್ಟಿಯ ವಿನಾಶಮಂ
ಅಣುವಿನೊಳಶಕ್ತಿಯಂ
ಲೋಕ ಮಾರಕಮಂ.

ಅದು ಶಾಂತಿದರ್ಶನಂ,
ಲೋಕತಾರಕ ಶಾಂತಿ;
ಇದು ಕ್ರಾಂತಿ ದರ್ಶನಂ,
ಲೋಕಮಾರಕ ಕ್ರಾಂತಿ.

ವಿಜ್ಞಾನಿಗಳ್ ಧರ್ಮಜ್ಞಾನಿಗಳ್ ತಾವಾಗಿ
ವಿಜ್ಞಾನದ ಸಿಡಿಲ್ ಬಾನವರ ಹೂವಾಗಿ
ಮಾನವರಿಗೊಸಗೆಯಾಗೆ
ಕ್ರಾಂತಿ ‘ಸಂಕ್ರಾಂತಿ’ಯಾಗೆ
ಶುಭವರಳೆ ಕ್ರಾಂತಿಯೊಳಗೆ
ನಿಶ್ಚಯಂ ಕಾಂತಿ ಇಳೆಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...