Home / ಕವನ / ಕವಿತೆ / ಅಣುಶಕ್ತಿ

ಅಣುಶಕ್ತಿ

ಅಂದು – ಋಷಿಗಳ್ ಯೋಗಿಗಳ ಪರಮ ದಾರ್ಶನಿಕರ್‍
ಭಕ್ತರ್‍ ವಿರಕ್ತರ್‍ ಕೀವಂದ್ರರ್‍
ದಿವ್ಯಚಕ್ಷುನಿನಿಂ
ಅಣುವನೊಡೆದರ್‍
ಕಂಡರದ್ಭುತಮಂ,
ಪೂರ್ಣ ದರ್ಶನಮಂ:
ವ್ಯೋಮ ಭೂಮಿಗಳೊಳ್

ರವಿಯಾಗಿ ಶಶಿಯಾಗಿ ತಾರಾನಿಕರಮಾಗಿ
ಸಿಡಿಲಾಗಿ ಮಿಂಚಾಗಿ ವೃಷ್ಟಿಯೆನಿಸಿ
ಕಡಲಾಗಿ ಭೂಮಿಯೊಡಲಾಗಿ
ತಾನ್ ಸರ್ವ ಸೃಷ್ಟಿಯೆನಿಸಿ
ಮೆರೆವ
ಪರಮ ತೇಜಸ್ವಿಯನ್
ಅಣುವಿಗಣುವಾದನನ್
ಮಹತೋಮಹೀಯನನ್
ಸರ್ವಶಕ್ತನನ್
ಸರ್ವಕಾರಣನನ್
ಪರಮಾತ್ಮನನ್
ಲೋಕತಾರಕನನ್.

ಇಂದು – ಹಿರಿ ವಿಜ್ಞಾನಿಗಳ್ ಪರಮ ಶಕ್ತರ್‍
ಪ್ರತ್ಯಕ್ಷತಾ ತತ್ವದತಿವೀರ ಭಕ್ತರ್‍
ಯಂತ್ರ ಚಕ್ಷುವಿನಿಂ
ಅಣುವನೊಡೆದರ್‍
ಜಗದ
ಕಟ್ಟನೊಡೆದರ್‍:
ಒಡೆದು
ಕಂಡರದ್ಭುತಮಂ,
ಖಂಡ ದರ್ಶನಮಂ:
ವ್ಯೋಮ ಜನ ಭುವಿಗಳೊಳ್
ರವಿ ಶಶಿಗಳಂ ನೊಣೆವ ರಾಹು ಸಮನಾಗಿ
ತಾರೆಗಳ ಮುಕ್ಕುಳಿಪ ತಮದ ರಕ್ಕಸನೆನಿಸಿ
ಸಿಡಿಲಾಗಿ ಸಿಡಿದು ಸೀಳ್ ಮಿಂಚಾಗಿ ಇಳಿದು
ಸುರಿದಗ್ನಿವೃಷ್ಟಿಯಾಗಿ
ಕಡಲನೇ ಕುಡಿದು ನೆಲಮೆಲ್ಲಮನ್ ಒಡೆದು
ಸೃಷ್ಟಿಸರ್ವಸ್ವಮಂ ಬಿಡದೆ ತೊಡೆದು
ಅತಿ ರೌದ್ರದೆಸಕದಿಂ
ಉರಿದು ಮಾಮಸಕದಿಂ
ಪ್ರಲಯ ರುದ್ರಂ ತಾನೆ ಎನಿಸಿ
ಮೆರೆವ
ಪರಮ ಪ್ರಕಾಶಮಂ
ಸೃಷ್ಟಿಯ ವಿನಾಶಮಂ
ಅಣುವಿನೊಳಶಕ್ತಿಯಂ
ಲೋಕ ಮಾರಕಮಂ.

ಅದು ಶಾಂತಿದರ್ಶನಂ,
ಲೋಕತಾರಕ ಶಾಂತಿ;
ಇದು ಕ್ರಾಂತಿ ದರ್ಶನಂ,
ಲೋಕಮಾರಕ ಕ್ರಾಂತಿ.

ವಿಜ್ಞಾನಿಗಳ್ ಧರ್ಮಜ್ಞಾನಿಗಳ್ ತಾವಾಗಿ
ವಿಜ್ಞಾನದ ಸಿಡಿಲ್ ಬಾನವರ ಹೂವಾಗಿ
ಮಾನವರಿಗೊಸಗೆಯಾಗೆ
ಕ್ರಾಂತಿ ‘ಸಂಕ್ರಾಂತಿ’ಯಾಗೆ
ಶುಭವರಳೆ ಕ್ರಾಂತಿಯೊಳಗೆ
ನಿಶ್ಚಯಂ ಕಾಂತಿ ಇಳೆಗೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...