ಅಣುಶಕ್ತಿ

ಅಂದು – ಋಷಿಗಳ್ ಯೋಗಿಗಳ ಪರಮ ದಾರ್ಶನಿಕರ್‍
ಭಕ್ತರ್‍ ವಿರಕ್ತರ್‍ ಕೀವಂದ್ರರ್‍
ದಿವ್ಯಚಕ್ಷುನಿನಿಂ
ಅಣುವನೊಡೆದರ್‍
ಕಂಡರದ್ಭುತಮಂ,
ಪೂರ್ಣ ದರ್ಶನಮಂ:
ವ್ಯೋಮ ಭೂಮಿಗಳೊಳ್

ರವಿಯಾಗಿ ಶಶಿಯಾಗಿ ತಾರಾನಿಕರಮಾಗಿ
ಸಿಡಿಲಾಗಿ ಮಿಂಚಾಗಿ ವೃಷ್ಟಿಯೆನಿಸಿ
ಕಡಲಾಗಿ ಭೂಮಿಯೊಡಲಾಗಿ
ತಾನ್ ಸರ್ವ ಸೃಷ್ಟಿಯೆನಿಸಿ
ಮೆರೆವ
ಪರಮ ತೇಜಸ್ವಿಯನ್
ಅಣುವಿಗಣುವಾದನನ್
ಮಹತೋಮಹೀಯನನ್
ಸರ್ವಶಕ್ತನನ್
ಸರ್ವಕಾರಣನನ್
ಪರಮಾತ್ಮನನ್
ಲೋಕತಾರಕನನ್.

ಇಂದು – ಹಿರಿ ವಿಜ್ಞಾನಿಗಳ್ ಪರಮ ಶಕ್ತರ್‍
ಪ್ರತ್ಯಕ್ಷತಾ ತತ್ವದತಿವೀರ ಭಕ್ತರ್‍
ಯಂತ್ರ ಚಕ್ಷುವಿನಿಂ
ಅಣುವನೊಡೆದರ್‍
ಜಗದ
ಕಟ್ಟನೊಡೆದರ್‍:
ಒಡೆದು
ಕಂಡರದ್ಭುತಮಂ,
ಖಂಡ ದರ್ಶನಮಂ:
ವ್ಯೋಮ ಜನ ಭುವಿಗಳೊಳ್
ರವಿ ಶಶಿಗಳಂ ನೊಣೆವ ರಾಹು ಸಮನಾಗಿ
ತಾರೆಗಳ ಮುಕ್ಕುಳಿಪ ತಮದ ರಕ್ಕಸನೆನಿಸಿ
ಸಿಡಿಲಾಗಿ ಸಿಡಿದು ಸೀಳ್ ಮಿಂಚಾಗಿ ಇಳಿದು
ಸುರಿದಗ್ನಿವೃಷ್ಟಿಯಾಗಿ
ಕಡಲನೇ ಕುಡಿದು ನೆಲಮೆಲ್ಲಮನ್ ಒಡೆದು
ಸೃಷ್ಟಿಸರ್ವಸ್ವಮಂ ಬಿಡದೆ ತೊಡೆದು
ಅತಿ ರೌದ್ರದೆಸಕದಿಂ
ಉರಿದು ಮಾಮಸಕದಿಂ
ಪ್ರಲಯ ರುದ್ರಂ ತಾನೆ ಎನಿಸಿ
ಮೆರೆವ
ಪರಮ ಪ್ರಕಾಶಮಂ
ಸೃಷ್ಟಿಯ ವಿನಾಶಮಂ
ಅಣುವಿನೊಳಶಕ್ತಿಯಂ
ಲೋಕ ಮಾರಕಮಂ.

ಅದು ಶಾಂತಿದರ್ಶನಂ,
ಲೋಕತಾರಕ ಶಾಂತಿ;
ಇದು ಕ್ರಾಂತಿ ದರ್ಶನಂ,
ಲೋಕಮಾರಕ ಕ್ರಾಂತಿ.

ವಿಜ್ಞಾನಿಗಳ್ ಧರ್ಮಜ್ಞಾನಿಗಳ್ ತಾವಾಗಿ
ವಿಜ್ಞಾನದ ಸಿಡಿಲ್ ಬಾನವರ ಹೂವಾಗಿ
ಮಾನವರಿಗೊಸಗೆಯಾಗೆ
ಕ್ರಾಂತಿ ‘ಸಂಕ್ರಾಂತಿ’ಯಾಗೆ
ಶುಭವರಳೆ ಕ್ರಾಂತಿಯೊಳಗೆ
ನಿಶ್ಚಯಂ ಕಾಂತಿ ಇಳೆಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೋಂಪುಡಿ ಗಾಡಿ
Next post ಇಳಾ – ೪

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys