ಮಹಾತ್ಮರ ಸೆರೆ

ಓ, ಮಹಾತ್ಮನೆ, ನಿನ್ನ ಬಂದಿಸಿಟ್ಟಿಹರೆಂದು
ಹಲರು ತಿಳಿದಿಹರು, ದಿಟ; ಆದರದು ತಪ್ಪೆಣಿಕೆ:
ಬಂಧನವ ಬಯಸಿ ಬರಮಾಡಿಕೊಂಡಿಹೆ; ಜನಕೆ
ಬಂಧನವೆ ಬಿಡುಗಡೆಗೆ ಹೆದ್ದಾರಿಯೊಂದೆಂದು
ತೋರಿಸಲು. ಜಗ ಜನಾಂಗಗಳೆಲ್ಲ ತಾವಿಂದು
ತಮ್ಮ ನಾಯಕರಿತ್ತ ಕುರುಡಾಣತಿಯ ಪಿಡಿದು
ತಾವಣ್ಣ ತಮ್ಮಂದಿರೊಬ್ಬರೊಬ್ಬರ ಕಡಿದು
ನಿರಪರಾಧಿಗಳಾದ ತಾಯ್ ಮಕ್ಕಳನು ಕೊಂದು
ಈ ಹೊಲ್ಲ ಯುದ್ಧ ನಡಸುತಿರೆ, ಪಾಪದ ಫಲಕೆ
ನಮ್ಮನೂ ಭಾಗಿ ಮಾಡಲು ಬಂದ ಭಾರತದ
ಅಣ್ಮರಿಗೆ ನೀನೊರೆದೆ: “ಸಲ್ಲದೀ ಭ್ರಾತೃವಧ;
ನಮ್ಮ ನೆರವಿದಕಿಲ್ಲ.”-ಇದನು ಸಾರುವ ಹಕ್ಕೆ
ನಾಡ ಬಿಡುಗಡೆಯೆಂದೆ-ಇದಕಾಯ್ತು ನಿನಗೆ ಸೆರೆ!
ಸತ್ಯದ ಅಹಿಂಸೆಯಾ ಸಂಗ್ರಾಮಕದುವೆ ಕರೆ!
(೧೯೪೨ರ ಆಗಸ್ಟಿನಲ್ಲಿ ಮಹಾತ್ಮ ಗಾಂಧಿಯವರು ಬಂಧನಕ್ಕೆ ಗುರಿಯಾದಾಗ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಚ್ಚೆ
Next post ಇಳಾ – ೧೦

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…