ಮಹಾತ್ಮರ ಸೆರೆ

ಓ, ಮಹಾತ್ಮನೆ, ನಿನ್ನ ಬಂದಿಸಿಟ್ಟಿಹರೆಂದು
ಹಲರು ತಿಳಿದಿಹರು, ದಿಟ; ಆದರದು ತಪ್ಪೆಣಿಕೆ:
ಬಂಧನವ ಬಯಸಿ ಬರಮಾಡಿಕೊಂಡಿಹೆ; ಜನಕೆ
ಬಂಧನವೆ ಬಿಡುಗಡೆಗೆ ಹೆದ್ದಾರಿಯೊಂದೆಂದು
ತೋರಿಸಲು. ಜಗ ಜನಾಂಗಗಳೆಲ್ಲ ತಾವಿಂದು
ತಮ್ಮ ನಾಯಕರಿತ್ತ ಕುರುಡಾಣತಿಯ ಪಿಡಿದು
ತಾವಣ್ಣ ತಮ್ಮಂದಿರೊಬ್ಬರೊಬ್ಬರ ಕಡಿದು
ನಿರಪರಾಧಿಗಳಾದ ತಾಯ್ ಮಕ್ಕಳನು ಕೊಂದು
ಈ ಹೊಲ್ಲ ಯುದ್ಧ ನಡಸುತಿರೆ, ಪಾಪದ ಫಲಕೆ
ನಮ್ಮನೂ ಭಾಗಿ ಮಾಡಲು ಬಂದ ಭಾರತದ
ಅಣ್ಮರಿಗೆ ನೀನೊರೆದೆ: “ಸಲ್ಲದೀ ಭ್ರಾತೃವಧ;
ನಮ್ಮ ನೆರವಿದಕಿಲ್ಲ.”-ಇದನು ಸಾರುವ ಹಕ್ಕೆ
ನಾಡ ಬಿಡುಗಡೆಯೆಂದೆ-ಇದಕಾಯ್ತು ನಿನಗೆ ಸೆರೆ!
ಸತ್ಯದ ಅಹಿಂಸೆಯಾ ಸಂಗ್ರಾಮಕದುವೆ ಕರೆ!
(೧೯೪೨ರ ಆಗಸ್ಟಿನಲ್ಲಿ ಮಹಾತ್ಮ ಗಾಂಧಿಯವರು ಬಂಧನಕ್ಕೆ ಗುರಿಯಾದಾಗ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಚ್ಚೆ
Next post ಇಳಾ – ೧೦

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

cheap jordans|wholesale air max|wholesale jordans|wholesale jewelry|wholesale jerseys