ನನ್ನ ಜೀವನ ನದಿಯ ಎದೆ ಮೊರೆತ

ನನ್ನ ಜೀವನ ನದಿಯ ಎದೆ ಮೊರೆತ ಶಾಂತತೆಯ
ಕಡಲಿನಲಿ ಮರೆಯಾಗಿ, ಕಲ್ಪನೆಯ ಕನಸುಗಳು
ವಿಶ್ರಾಂತಿಗಾಗೊರಲಿ ವಿರಹಿಯಾಗಿಹ ಮನವ
ಬಿಸಿ ಮುಳ್ಳುಗಳ ಹಾಗೆ ಒತ್ತೊತ್ತಿ ಕಾಡುವುದು
ನಿಲ್ಲಿಸಿದ ದಿನದಂದು ಈ ಎಡೆಗೆ ಸಾಗುವೆಯ?
ಹೃದಯದಲಿ ಹಾವಿಟ್ಟು ವಿಷವ ಹುಸಿಯಲಿ ಮರೆಸಿ
ಹೂಹಾರಗಳ ತಂದು ಶವದ ಮುಖ ಸಿಂಗರಿಪ
ಬಂಧುಗಳ ಗುಂಪಿನಲಿ ಸೇರುವೆಯ ಕೊರಗಿನಲಿ!
ನಾವೀರ್ವರೂ ಕಂಡು ಜತೆಯಲಿದ್ದುದು ಎಲ್ಲೊ
ಕೆಲವೆ ದಿನಗಳು ಮಾತ್ರ-ಅದು ಕೂಡ ವಿಷಮತೆಯ
ದ್ವೇಷದಲಿ ಕಳೆದಿದ್ದೆ! ಮುಂದಕೆಂತೋ ಎಲ್ಲೊ
ಎನುವ ಒಲವಿನ ದುಗುಡ, ನನ್ನ ಹೃದಯದ ಕುದಿತ!
ಅದು ಸಾಗಿ ಹೋದಂದು ಸಾವಶಾಂತಿಯ ದಿನದಿ
ನೀ ಬಂದು ಹೃದಯವನು ಹರಿಸುವೆಯ ಕೊರಗಿನಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಸ್ತಕ ತಿಂತು ಮನುಷ್ಯನ್ನ
Next post ಅಡಿಕ್ಟ್

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys