ಕೊಲ್ಲದ ಕಾಳೆಗ

ಬನ್ನಿರಿ ಬಾಲರೆ ನಡೆಯಿರಿ ಗೆಳೆಯರೆ
ನಾಡಿನ ಬಿಡುಗಡೆ ಕಾಳೆಗಕೆ
ತನ್ನಿರಿ ನಿಮ್ಮ ಕಪ್ಪ ಕಾಣಿಕೆಯ
ಭಾರತ ಮಾತೆಯ ಓಲಗಕೆ!

ಸತ್ಯದ ಕುದುರೆಯನೆಲ್ಲರು ಹತ್ತಿ
ಹಿಡಿದು ಝಳಪಿಸಿರಿ ಅಹಿಂಸೆ ಕತ್ತಿ
ತಿರುಗಿಸಿ ಗಿರ್‍ರನೆ ನೂಲುವ ಚರಕ
ಹುಟ್ಟಡಗಲಿ ದಾರಿದ್ರ್‍ಯದ ನರಕ.

ಹಿಂದೂ ಮುಸ್ಲಿಮ ಸಿಕ್ಕ ಪಾರಸಿಕ
ಜೈನ ಬೌದ್ಧ ಈಸಾಯಿ ಯೆಹೂದ್ಯ
ಉಚ್ಚ ನೀಚ ಕುಲ ಸ್ಪೃಶ್ಯಾಸ್ಪೃಶ್ಯ
ಎಂಬೀ ಭೇದಗಳನು ಮರೆದು
ಒಂದೇ ಮನದಲಿ ನುಗ್ಗಿರಿ ಮುಂದಕೆ
ದ್ವೇಷಭಾವನೆಯ ತೊರೆದು!

ವೈರಿಗಳೆಲ್ಲರು ಮಿತ್ರರೆ ಅಂದು
ಅವರೆಲ್ಲರ ರಣರಂಗದಿ ಕೊಂದು
ಪಾಪವ ಗೈಯುವ ಉದ್ಯೋಗ
ಇಲ್ಲ: ನಮ್ಮದಾತ್ಮತ್ಯಾಗ.
ಮೂಡಿದಂದು ಸ್ವಾತಂತ್ರ್‍ಯದ ಸೂರ್‍ಯ
ಮುಗಿವುದು ನಮ್ಮ ಯುದ್ಧದ ಕಾರ್‍ಯ;
ಅದಕಾಗಿಯೆ ನಾವ್ ದುಡಿಯೋಣ,
ಅವಶ್ಯಬಿದ್ದರೆ ಮಡಿಯೋಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿಗೆ
Next post ಇಳಾ – ೭

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys