ಕೊಲ್ಲದ ಕಾಳೆಗ

ಬನ್ನಿರಿ ಬಾಲರೆ ನಡೆಯಿರಿ ಗೆಳೆಯರೆ
ನಾಡಿನ ಬಿಡುಗಡೆ ಕಾಳೆಗಕೆ
ತನ್ನಿರಿ ನಿಮ್ಮ ಕಪ್ಪ ಕಾಣಿಕೆಯ
ಭಾರತ ಮಾತೆಯ ಓಲಗಕೆ!

ಸತ್ಯದ ಕುದುರೆಯನೆಲ್ಲರು ಹತ್ತಿ
ಹಿಡಿದು ಝಳಪಿಸಿರಿ ಅಹಿಂಸೆ ಕತ್ತಿ
ತಿರುಗಿಸಿ ಗಿರ್‍ರನೆ ನೂಲುವ ಚರಕ
ಹುಟ್ಟಡಗಲಿ ದಾರಿದ್ರ್‍ಯದ ನರಕ.

ಹಿಂದೂ ಮುಸ್ಲಿಮ ಸಿಕ್ಕ ಪಾರಸಿಕ
ಜೈನ ಬೌದ್ಧ ಈಸಾಯಿ ಯೆಹೂದ್ಯ
ಉಚ್ಚ ನೀಚ ಕುಲ ಸ್ಪೃಶ್ಯಾಸ್ಪೃಶ್ಯ
ಎಂಬೀ ಭೇದಗಳನು ಮರೆದು
ಒಂದೇ ಮನದಲಿ ನುಗ್ಗಿರಿ ಮುಂದಕೆ
ದ್ವೇಷಭಾವನೆಯ ತೊರೆದು!

ವೈರಿಗಳೆಲ್ಲರು ಮಿತ್ರರೆ ಅಂದು
ಅವರೆಲ್ಲರ ರಣರಂಗದಿ ಕೊಂದು
ಪಾಪವ ಗೈಯುವ ಉದ್ಯೋಗ
ಇಲ್ಲ: ನಮ್ಮದಾತ್ಮತ್ಯಾಗ.
ಮೂಡಿದಂದು ಸ್ವಾತಂತ್ರ್‍ಯದ ಸೂರ್‍ಯ
ಮುಗಿವುದು ನಮ್ಮ ಯುದ್ಧದ ಕಾರ್‍ಯ;
ಅದಕಾಗಿಯೆ ನಾವ್ ದುಡಿಯೋಣ,
ಅವಶ್ಯಬಿದ್ದರೆ ಮಡಿಯೋಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿಗೆ
Next post ಇಳಾ – ೭

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…