ನಾಡ ಹಬ್ಬ

ಎಂದಿನಂತೆಯೆ ಬಂದಿತೇ ನಾಡ ಹಬ್ಬ?
ನಮ್ಮ ನಾಯಕರೆಮ್ಮನಾಳುವುದೆ ಹಬ್ಬ!
ಅದು ಹೊರತು, ಹಸಿದವನ ಕೈಗಿತ್ತು ಕಬ್ಬ,
‘ಓದಿ ತಣಿ’ ಎಂದಂತೆ ನಾಡಹಬ್ಬ!

ಬಣಜಿಗನ ಬೊಕ್ಕಸವು ತುಂಬಿತಿದೆ ಗಿಡಿದು;
ಕಾರ್ಮಿಕರು ಕೆರಳಿಹರು ತಮ್ಮ ಕನಸೊಡೆದು;
ಕ್ಷಾಮಮಾರಿಯ ಮುಂದೆ ಬಡಜನರು ಮಡಿದು
ಬಲಿಯಾಗುತಿಹರಿದುವೆ ನಾಡಹಬ್ಬ!

ಒಬ್ಬ ತಾಯಿಯ ಮಕ್ಕಳೆಂಬರಿವ ತೊರೆದು
ಸೇಡು ಮರುಸೇಡಿನಲಿ ಮತದ ಬಾಳ್ ಹಿರಿದು
ಹೇಟಿತನದಲಿ ಒಬ್ಬರನ್ನೊಬ್ಬರಿರಿದು

ಕೊಂದು ಕಾಳಿಗೆ ಬಿರ್ದು: ಇದುವೆ ಹಬ್ಬ!
ಸ್ನೇಹ ಸೌಹಾರ್ದ ನೆಲೆಗೊಳಲಿ: ಅದೆ ಹಬ್ಬ!
ಇಳೆ ಕಾಂತಿ ಪುಷ್ಟಿ ತುಷ್ಟಿಗಳೊಂದೆ ಹಬ್ಬ!
ನಾಡೆಲ್ಲ ನಲಿಯುತಿರಲಂದದುವೆ ಹಬ್ಬ!
ವರುಷಕೊಮ್ಮೆಯೆ? ನಿತ್ಯ ನಾಡಹಬ್ಬ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂನ್‌ಮೂನಣ್ಣ
Next post ಇಳಾ – ೮

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…