ನಾಡ ಹಬ್ಬ

ಎಂದಿನಂತೆಯೆ ಬಂದಿತೇ ನಾಡ ಹಬ್ಬ?
ನಮ್ಮ ನಾಯಕರೆಮ್ಮನಾಳುವುದೆ ಹಬ್ಬ!
ಅದು ಹೊರತು, ಹಸಿದವನ ಕೈಗಿತ್ತು ಕಬ್ಬ,
‘ಓದಿ ತಣಿ’ ಎಂದಂತೆ ನಾಡಹಬ್ಬ!

ಬಣಜಿಗನ ಬೊಕ್ಕಸವು ತುಂಬಿತಿದೆ ಗಿಡಿದು;
ಕಾರ್ಮಿಕರು ಕೆರಳಿಹರು ತಮ್ಮ ಕನಸೊಡೆದು;
ಕ್ಷಾಮಮಾರಿಯ ಮುಂದೆ ಬಡಜನರು ಮಡಿದು
ಬಲಿಯಾಗುತಿಹರಿದುವೆ ನಾಡಹಬ್ಬ!

ಒಬ್ಬ ತಾಯಿಯ ಮಕ್ಕಳೆಂಬರಿವ ತೊರೆದು
ಸೇಡು ಮರುಸೇಡಿನಲಿ ಮತದ ಬಾಳ್ ಹಿರಿದು
ಹೇಟಿತನದಲಿ ಒಬ್ಬರನ್ನೊಬ್ಬರಿರಿದು

ಕೊಂದು ಕಾಳಿಗೆ ಬಿರ್ದು: ಇದುವೆ ಹಬ್ಬ!
ಸ್ನೇಹ ಸೌಹಾರ್ದ ನೆಲೆಗೊಳಲಿ: ಅದೆ ಹಬ್ಬ!
ಇಳೆ ಕಾಂತಿ ಪುಷ್ಟಿ ತುಷ್ಟಿಗಳೊಂದೆ ಹಬ್ಬ!
ನಾಡೆಲ್ಲ ನಲಿಯುತಿರಲಂದದುವೆ ಹಬ್ಬ!
ವರುಷಕೊಮ್ಮೆಯೆ? ನಿತ್ಯ ನಾಡಹಬ್ಬ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂನ್‌ಮೂನಣ್ಣ
Next post ಇಳಾ – ೮

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys