Home / ಕವನ / ಕವಿತೆ / ಅಪೂರ್ವ ಸಂಧ್ಯಾಚಿತ್ರ

ಅಪೂರ್ವ ಸಂಧ್ಯಾಚಿತ್ರ

ನಾಗರಿಕ ಜೀವನದ ಗರ್ಭದೊಳಗಡೆ ಸಿಲುಕಿ
ಕತ್ತಲೆಯೆ ಬೆಳಕೆನಿಸಿ, ಬೆಳಗು ಬೈಗುಗಳೆಂಬ
ಭೇದ ಬರಿ ನೆನಪಾಗಿ, ಗಾಣದೆತ್ತಿನ ದುಡಿತ
ಹವಣಿಸುವ ಬೇಸರದ ಜೊತೆಗೆ, ನಿತ್ಯವು ಹೊಟ್ಟೆ
ಬಟ್ಟೆಗಳ ಹಂಚಿಕೆಯ ಹೊಂಚಿಕೆಯ ಹುಸಿ ಬಾಳ
ಲಂಚ ಪ್ರಪಂಚದಲಿ ಸತ್ಯನಿಷ್ಠನ ಸಾವು-
ಬದುಕಿನಾ ಧಗೆಯ ಬಿರು ಹೊಯ್ಲಿನಲಿ, ಭಾರತದ
ಯಾವುದೋ ಮೂಲೆಯಲಿ ಹೊತ್ತಿ ಹಬ್ಬಿದ ಮತ-
ದ್ವೇಷದನಿರೀಕ್ಷಿತದ ಕಾಳ್ಕಿಚ್ಚಿನಿಂದೊಗೆದ
ಹೊಗೆಯ ಹಬ್ಬುಗೆಯ ಮಬ್ಬಿನ ನಿರಾಶೆಯ ಸರ್ವ
ಶೂನ್ಯದಲಿ – ಕಂಡಿದ್ದುದಿಲ್ಲೆನಗೆ ಒಮ್ಮೆಯುಂ
ಸಂಜೆವೆಣ್ಣಿನ ರಾಗಪೂರ್ಣ ಮುಖ ಸರಸಿಜವು.
ಇದ್ದಕಿದ್ದಂತೆಯೇ ಕಂಡೆತೆನಗಿಂದು, ಹಾ!
ದೂರ ಪ್ರತೀಚಿ ದಿಙ್ಮಂಡಲದ ರಾಜ್ಯದಲಿ –
ಕೆಂಪು ಕಡುಗೆಂಪು ಕೆಂಗೆಂಪು ಕಗ್ಗೆಂಪು, ಬರಿ
ಕೆಂಪು – ಹೋಲಿಕೆಗಾಗಿ ಕಲ್ಪನೆಯೆ ಕಂಗೆಟ್ಟು
ಬೇಸತ್ತು ಬಸವಳಿದು ಬಿದ್ದು ರಕ್ತವ ಕಾರೆ,
ಒಡನೆಯೇ ಕಲ್ಪನೆಗೆ ಹೊಳೆಯಿತ್ತು – ಆದೊಡೇಂ,
ಹೋಲಿಕೆಯದಲ್ಲ: ಸಂಧ್ಯಾರಮಣಿ ತಲೆಯಲ್ಲಿ
ತಳೆದ ಬಯ್‌ತಲೆಯ ಮಹ ಮಾಣಿಕದ ಕೆಂಬೆಳಕೊ,
ದಿಗ್ವಧುವಿನಧರ ರಾಗದ ಹರಹೊ – ಎಂಬಿವೇ
ಮೊದಲಪ್ಪ ಕಾವ್ಯದುತ್ಪ್ರೇಕ್ಷೆಗಳ ಹೊಸ ರೂಪ
ತಾನಲ್ಲ: ಅಲ್ಲಲ್ಲಿ ಎಲ್ಲೆಲ್ಲು ನಡೆಯುತಿಹ,
ಯುದ್ಧ ಅಂತಃಕಲಹ ಹಗಲುಕೊಲೆ ಮೊದಲಪ್ಪ
ಘಟನೆಗಳ ಘೋರ ವಾಸ್ತವ ವರ್ಣಚಿತ್ರವದು:
ದಿಕ್ಕು ದಿಕ್ಕುಗಳಿಂದ ಕೆನ್ನೀರ ಕಾಲ್ವೆಗಳು
ಹರಿದು ಬಂದಿಲ್ಲಿ ಹೆಮ್ಮಡುವಾಗಿ ಕೂಡಿಕೊಳೆ,
ಕೆನ್ನೀರ ಕೋಡಿಯಲಿ ತೇಲಿಬಂದಟ್ಟೆಗಳು
ಒಟ್ಟೈಸಿ ನಿಂದಿಹವು: ಇದುವೆ ಪಶ್ಚಿಮ ದಿಶಾ
ಪಟದ ಮೇಲಣ ರಕ್ತ ವರ್ಣ ಚಿತ್ರವದು.

ಇರಲಿರಲು, ನೆತ್ತರ ಸರೋವರದ ನೈದಿಲೆಯೊ
ಎಂಬಂತೆ ಮೂಡಿದನು ಬಾಲ ಶಶಿ: ಮೂಡಿ, ತಾನ್
ನಕ್ಕು ನುಡಿದನು ಇಂತು: “ಧೈರ್‍ಯಗೆಡದಿರು ಗೆಳೆಯ:
ನಂಜುನೆತ್ತರು ಹೊರಗೆ ಬಂದಿತೆಂದೆಂದುಕೊಳು;
ಶಾಂತಿ ಮೂಡುವುದು: ಬರವಸೆಯಾಶೆಗಳ ತಾಳು.”
ಬಾಲಚಂದ್ರನ ಕಾಂತಿ ಕಿರಣಗಳು ನಸು ಬೆಳಗಿ
ಕೆಂಬಣ್ಣ ಮಾಸುತಿರೆ, – ‘ಹುಣ್ಣಿಮೆಯು ಬರದಿಹುದೆ?
ಪೂರ್ಣಚಂದ್ರನು ಪೂರ್ಣ ಕಾಂತಿ ಚಂದ್ರಿಕೆಯನ್ನು
ಚೆಲ್ಲಿ ಸೂಸನೆ?’ – ಎಂಬ ಮಾರ್ದನಿಯು ಮನದಲ್ಲಿ
ಮೊರೆಯುತಿರೆ, ಮರೆಯಾಯ್ತಪೂರ್ವ ಸಂಧ್ಯಾಚಿತ್ರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...