ಮನೆಯು ಪಾಲಾಯ್ತು

“ಮನೆಯು ಪಾಲಾಯ್ತು
ಒರ್‌ಬಾಳ್ವೆ ಹೋಳಾಯ್ತು
ಕರುಳೆರಡು ಸೀಳಾಯ್ತು
ಅಯ್ಯೊ! ಅಕಟಕಟಾ!
ಎರಡಾಯ್ತು ಬಾವುಟ”
ಎಂದು ಗೋಳಾಡದಿರು
ಓ, ಗೆಳೆಯನೇ!

ಕಲಹ ಪಾಲಿಗೆ ಮೊದಲು:
ಹೊಗೆಯಿತಸಮಾಧಾನ,
ಉರಿಯಿತು ದುರಭಿಮಾನ.
ತಮ್ಮ, ಪಸುಗೆಯ ಬಯಸಿ
ಕೈಮಾಡಿದನು, ಮುನಿದು;
ಒಬ್ಬಣ್ಣ ಸುಮ್ಮನಿರೆ
ಉಳಿದರಂತಿಹರೆ?

ಹೊಡೆತಕ್ಕೆ ಮರುಹೊಡೆತ;
ಮತದ ಮದ್ದಿನ ಸಿಡಿತ!
ಮಾರಿಗಾಯ್ತೌತಣ;
ನಾಡೆಲ್ಲ ರಣ ರಣ!

ತಡವೆ ರೋಗನಿದಾನ!
ಒಳಗೆಲ್ಲೊ ವಿಷದ ಸೆಲೆ
ಉಪಚಾರ ಮೇಲ್ಮೇಲೆ!
ಅರಿವು ಮೂಡಿದ ಮೇಲೆ
ನಿಜದ ಸಂಧಾನ.
ನಮ್ಮ ಮನೆ ಪಾಲಾಗೆ
ಬೇಕಾಯ್ತು ಕಡೆಗೆಮಗೆ
ಹೆರರ ತೀರ್ಮಾನ!

ಎಲ್ಲವೂ ಆಯ್ತು, ದಿಟ!
ಪಾಲಾಯ್ತು ಮನೆ ಮಠ,
ಹಣಕಾಸು ಆಳು ಭಟ;
ಒಂದೆಸೆದ ಬಾವುಟ!
ಗೆದ್ದಿತೆಲ್ಲರ ಹಟ!
ಇನ್ನೇತಕಾ ಗೋಳು?

ನೋಡು ನಾಳಿನ ಬಾಳು:
ನಗುತಿರಲಿ ಆ ಮನೆ,
ನಗುತಿರಲಿ ಈ ಮನೆ!
ಅವರ ಬಾವುಟವವರು
ನಮ್ಮ ಬಾವುಟ ನಾವು
ಏರಿಸುವ! ಹಾರಿಸುವ!
ಒಲುಮೆ ತೋರಿಸುವ!
ನಮ್ಮ ಕರುಳಿನ ನಂಟು
ಬಿಡಿಸಲಾಗದ ಗಂಟು:
ಈ ನಂಬಿಕೆಯ ಬೆಳಕೆ
ಒಡೆದ ಮನಕಂಟು!

ಬೇರೆಯಿಹ ಕೈಗಳನು
ಮುಗಿದು ವಂದಿಸಿದಂತೆ;
ಎರಡು ಕಣ್ಣಿನ ಕವಲು-
ನೋಟ ಸಂಧಿಸಿದಂತೆ;
ಇಬ್ಬಗೆಯ ಹೂಗಳನು
ಹಾರಕೊಂದಿಸಿದಂತೆ;
ಗಂಡು ಹೆಣ್ಣಿನ ಬಾಳ-
ನೊಲುಮೆ ಬಂಧಿಸಿದಂತೆ;
ಕವಲೊಡೆದ ಕಾವೇರಿ
ಮತ್ತೆ ಕೂಡಿದ ತೆರದಿ;
ಬೇಡನಾವನೊ ಬಂದು
ಎರಡು ಗೂಡಿನಲಿಟ್ಟ
ಜೊತೆಯ ಹಕ್ಕಿಗೆ ಕಟ್ಟ-
ಕಡೆಗೆ ಬಿಡುಗಡೆ ದೊರೆಯೆ
ಅವು ಹಾರಿ ನೆರೆವಂತೆ;
ಹುಟ್ಟು ಧರಿಸಿದ ಆತ್ಮ
ಪರಮಾತ್ಮನಲಿ ಕಡೆಗೆ
ಬೆರೆತೈಕ್ಯವಪ್ಪಂತೆ;
ನಾವು ಸೋದರರಿಂದು
ಬೇರಾದರೇನಂತೆ,-
ಮನವೊಡೆಯದಂತೆ
ಮನೆಯೊಡೆಯದಂತೆ
ಮತ್ತೆ ಬೆರೆಯೋಣ,
ಹೊಸ ಬಾಳ ತೆರೆಯೋಣ,
ಶಾಂತಿ ಸೌಹಾರ್ದಗಳ
ಅಮೃತವರ್ಷದ ಧಾರೆ
ಇಳೆಗೆಲ್ಲ ಕರೆಯೋಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತುಂತುರು ಮಳೆ
Next post ಇಳಾ – ೧೩

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys