Home / ಕವನ / ಕವಿತೆ / ಅಮೃತ ಸ್ವಾತಂತ್ರ್‍ಯ

ಅಮೃತ ಸ್ವಾತಂತ್ರ್‍ಯ

ಗಳಿಸಿಕೊಂಡಿಹೆವಿಂದು ಸ್ವಾತಂತ್ರ್‍ಯ ಭಾಗ್ಯವನು
ಉಳಿಸಿಕೊಳ್ಳುವೆವೇನು ಅದನು ಮುಂದಿನ್ನು?

ಜಾತಿ ಮತ ಪಂಥಗಳ ಭೇದಗಳನೆ ಹಿಡಿದು,
ರೀತಿ ನೀತಿಯ ತೊರೆದು, ಗುಣಕೆ ಮನ್ನಣೆ ತಡೆದು,
ಭೀತಿಯನ್ನೊಡ್ಡಿ ಜನತೆಯ ಹಕ್ಕುಗಳ ಕಡಿವ
ಸರ್ವಾಧಿಕಾರ ಬರೆ ಸ್ವಾತಂತ್ರ್‍ಯವೆ?

ಬಡವ ಬಲ್ಲಿದನೆಂಬ ಭೇದಗಳು ಇನ್ನುಳಿಯೆ
ಅವರಿಬ್ಬರೊಳದ್ವೇಷದುರಿ ಹೊತ್ತಿ ಬಲ್‌ಬೆಳೆಯೆ
ನಾಡೊಳು ಅಶಾಂತಿ ಅಂತಃಕಲಹಗಳು ಮೊಳೆಯೆ-
ಕಾದಾಡುವಾ ಹಕ್ಕೆ ಸ್ವಾತಂತ್ರ್‍ಯವೆ?

ಅರೆಹೊಟ್ಟೆ ತಿನ್ನುವುದೆ ನಿತ್ಯನಿಯಮವದಾಗೆ
ಇನ್ನು ಮಾರದೆ ಉಳಿಯೆ ಬಡತನದ ಬಿರುಬೇಗೆ
ಊರು ಕೇರಿಗಳೆಲ್ಲ ಭಿಕ್ಷುಕರ ಬೀಡಾಗೆ
ಸಾವು ಬದುಕಿನ ನರಕ ಸ್ವಾತಂತ್ರ್‍ಯವೆ?

ನಾಡ ಮಕ್ಕಳು ಮಂದಿ ಅಜ್ಞಾನದಲಿ ಮುಳುಗಿ
ಎಲ್ಲೊ ಹಲಕೆಲರು ಪಂಡಿತರೆನಿಸಿ ಬೆಳಗಿ
ಸ್ವಾರ್ಥಸಾಧಕರ ಪಡೆ ನಾಡೆಲ್ಲ ತಿರುಗುತಿರೆ
ಅವರ ತಾಳಕೆ ಕುಣಿಯೆ ಸ್ವಾತಂತ್ರ್‍ಯವೆ?

ಸಾಮ್ಯವಾದದ ಹೆಸರ ಹಲಗೆಯನು ಮುಂದಿಟ್ಟು
ವಿಜ್ಞಾನ ಯುಗವೆಂದು ಧರ್ಮವನು ಕಟ್ಟಿಟ್ಟು
ಪ್ರಾಚೀನ ಸಂಸ್ಕೃತಿಯ ಸುಟ್ಟು ಕರಿಬೊಟ್ಟಿಟ್ಟು
ಮುಂದುವರಿಯುವೆವೆನಲು ಸ್ವಾತಂತ್ರ್‍ಯವೆ?

ನಮ್ಮ ನಡೆ ನುಡಿ ನೋಟ ನಮ್ಮ ನಯ ನೀತಿ ನೆಲೆ
ನಮ್ಮ ನಾಡಿನ ಜ್ಞಾನ ಭಂಡಾರದತುಳ ಬೆಲೆ
ಧರ್ಮಬಾಹಿರ ಯಂತ್ರಜೀವನದಿನಾಗೆ ಕೊಲೆ
‘ನಾವು ನಾವಲ್ಲದಿಹ’ ಬದುಕು ಸ್ವಾತಂತ್ರ್‍ಯವೆ?

ತನ್ನ ನಂಬಿದ ಬೆಳಕ ಹಿಡಿದು ನಿಲಲಾಗದಿರೆ
ತನ್ನ ಕಾಣ್ಕೆಯ ಸತ್ಯ ನುಡಿಯಲನುವಿಲ್ಲದಿರೆ
ತನ್ನ ಇಚ್ಛೆಯ ಬಾಳ್ಕೆ ನಡೆಸಲೆಡೆಯಿಲ್ಲದಿರೆ
ದೊರೆತ ಸ್ವಾತಂತ್ರ್‍ಯವದು ಸ್ವಾತಂತ್ರ್‍ಯವೆ?

ದೇವನೆದುರಿನಲೆಲ್ಲ ಸರ್ವಸಮರೆನಿಸುತ್ತ
ಧರ್ಮ ನೆಲೆ ತಪ್ಪದೊಲು ಸಮತೆಯನು ಸಾಧಿಸುತ
ಇಹದ ಹಾಲಿಗೆ ಪರದ ಸಕ್ಕರೆಯ ಬೆರಸುತ್ತ
ಬಾಳಲಪ್ಪುದೆ ಅಮೃತ ಸ್ವಾತಂತ್ರ್‍ಯವಲ್ತೆ?
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...