ಅಮೃತ ಸ್ವಾತಂತ್ರ್‍ಯ

ಗಳಿಸಿಕೊಂಡಿಹೆವಿಂದು ಸ್ವಾತಂತ್ರ್‍ಯ ಭಾಗ್ಯವನು
ಉಳಿಸಿಕೊಳ್ಳುವೆವೇನು ಅದನು ಮುಂದಿನ್ನು?

ಜಾತಿ ಮತ ಪಂಥಗಳ ಭೇದಗಳನೆ ಹಿಡಿದು,
ರೀತಿ ನೀತಿಯ ತೊರೆದು, ಗುಣಕೆ ಮನ್ನಣೆ ತಡೆದು,
ಭೀತಿಯನ್ನೊಡ್ಡಿ ಜನತೆಯ ಹಕ್ಕುಗಳ ಕಡಿವ
ಸರ್ವಾಧಿಕಾರ ಬರೆ ಸ್ವಾತಂತ್ರ್‍ಯವೆ?

ಬಡವ ಬಲ್ಲಿದನೆಂಬ ಭೇದಗಳು ಇನ್ನುಳಿಯೆ
ಅವರಿಬ್ಬರೊಳದ್ವೇಷದುರಿ ಹೊತ್ತಿ ಬಲ್‌ಬೆಳೆಯೆ
ನಾಡೊಳು ಅಶಾಂತಿ ಅಂತಃಕಲಹಗಳು ಮೊಳೆಯೆ-
ಕಾದಾಡುವಾ ಹಕ್ಕೆ ಸ್ವಾತಂತ್ರ್‍ಯವೆ?

ಅರೆಹೊಟ್ಟೆ ತಿನ್ನುವುದೆ ನಿತ್ಯನಿಯಮವದಾಗೆ
ಇನ್ನು ಮಾರದೆ ಉಳಿಯೆ ಬಡತನದ ಬಿರುಬೇಗೆ
ಊರು ಕೇರಿಗಳೆಲ್ಲ ಭಿಕ್ಷುಕರ ಬೀಡಾಗೆ
ಸಾವು ಬದುಕಿನ ನರಕ ಸ್ವಾತಂತ್ರ್‍ಯವೆ?

ನಾಡ ಮಕ್ಕಳು ಮಂದಿ ಅಜ್ಞಾನದಲಿ ಮುಳುಗಿ
ಎಲ್ಲೊ ಹಲಕೆಲರು ಪಂಡಿತರೆನಿಸಿ ಬೆಳಗಿ
ಸ್ವಾರ್ಥಸಾಧಕರ ಪಡೆ ನಾಡೆಲ್ಲ ತಿರುಗುತಿರೆ
ಅವರ ತಾಳಕೆ ಕುಣಿಯೆ ಸ್ವಾತಂತ್ರ್‍ಯವೆ?

ಸಾಮ್ಯವಾದದ ಹೆಸರ ಹಲಗೆಯನು ಮುಂದಿಟ್ಟು
ವಿಜ್ಞಾನ ಯುಗವೆಂದು ಧರ್ಮವನು ಕಟ್ಟಿಟ್ಟು
ಪ್ರಾಚೀನ ಸಂಸ್ಕೃತಿಯ ಸುಟ್ಟು ಕರಿಬೊಟ್ಟಿಟ್ಟು
ಮುಂದುವರಿಯುವೆವೆನಲು ಸ್ವಾತಂತ್ರ್‍ಯವೆ?

ನಮ್ಮ ನಡೆ ನುಡಿ ನೋಟ ನಮ್ಮ ನಯ ನೀತಿ ನೆಲೆ
ನಮ್ಮ ನಾಡಿನ ಜ್ಞಾನ ಭಂಡಾರದತುಳ ಬೆಲೆ
ಧರ್ಮಬಾಹಿರ ಯಂತ್ರಜೀವನದಿನಾಗೆ ಕೊಲೆ
‘ನಾವು ನಾವಲ್ಲದಿಹ’ ಬದುಕು ಸ್ವಾತಂತ್ರ್‍ಯವೆ?

ತನ್ನ ನಂಬಿದ ಬೆಳಕ ಹಿಡಿದು ನಿಲಲಾಗದಿರೆ
ತನ್ನ ಕಾಣ್ಕೆಯ ಸತ್ಯ ನುಡಿಯಲನುವಿಲ್ಲದಿರೆ
ತನ್ನ ಇಚ್ಛೆಯ ಬಾಳ್ಕೆ ನಡೆಸಲೆಡೆಯಿಲ್ಲದಿರೆ
ದೊರೆತ ಸ್ವಾತಂತ್ರ್‍ಯವದು ಸ್ವಾತಂತ್ರ್‍ಯವೆ?

ದೇವನೆದುರಿನಲೆಲ್ಲ ಸರ್ವಸಮರೆನಿಸುತ್ತ
ಧರ್ಮ ನೆಲೆ ತಪ್ಪದೊಲು ಸಮತೆಯನು ಸಾಧಿಸುತ
ಇಹದ ಹಾಲಿಗೆ ಪರದ ಸಕ್ಕರೆಯ ಬೆರಸುತ್ತ
ಬಾಳಲಪ್ಪುದೆ ಅಮೃತ ಸ್ವಾತಂತ್ರ್‍ಯವಲ್ತೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಗಡೆ
Next post ಇಳಾ – ೧೪

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys