ವೀರಗಲ್ಲು

ನಿಲ್ಲೆಲವೊ ಪಯಣಿಗನೆ ನಿಲ್ಲು! ನಿಲ್ಲು!
ಮುಂದೆಲ್ಲಿ ಸಾಗುತಿಹೆ ನಮ್ಮ ಮರೆತು
ಎಲ್ಲರಂತೆಯೆ ಕಿವುಡೆ ನಿನ್ನ ಮನಸು
-ಕೂಗಿದೆ ವೀರಗಲ್ಲು!   ೧

ಒಟ್ಟಿಹರು ಒಂದೆಡೆಗೆ ನಮ್ಮನೆಲ್ಲ
ಉಸಿರಾಡಲೆಡೆಯಿಲ್ಲವೆಮ್ಮ ಬಾಳು!
ಆರು ನಾವೆಂಬುದನೆ ಅರಿಯದಿಂತು
ಬಸವಳಿದು ಬಿದ್ದಿಹೆವು!   ೨

ಜೀವ ತೆತ್ತವರೆನಿತೊ ಜನಗಳಾವು
ಜನರ ಬಾಳುವೆಗಾಗಿ ತೆತ್ತು ಬಾಳು
ಮೌನದಲಿ ಉರುಳಿದೆವು-ಜನರು ಬಂದು
ತುಳಿಯುವರು ಸಂತಸದಿ!   ೩

ಅಂದೆಮ್ಮ ಬಿಸಿ ರಕುತ ಬಸಿದು ಬಸಿದು
ಬೇಗೆಯಲಿ ಬೆಂದವ ಬಾಳನುಳಿಸಿ
ಅಳೆದೆವಾವದಕಾಗಿ ಇದುವೆ ಜಗವು
ನಮಗೆ ತೋರಿದ ಕರುಣೆ!   ೪

ನಡೆ ಮುಂದೆ, ನಡೆ ಮುಂದೆ, ಪಯಣ ಸಾಗು
ಕಣ್ಣೀರಿನಲಿ ನೆಲವ ತೊಯಿಸಬೇಡ
ಇಂದೆ ಮೊದಲಿಗೆ ಜಗದಿ ಎದೆಯ ನೀರು
ನಮ್ಮ ತಲೆ ತೊಳೆದಿಹುದು!   ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತಿನಲಿ ಹೃದಯವಿರಲಿ
Next post ಅಧಿಕಾರ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys