Home / ಕವನ / ಕವಿತೆ / ಅಶೋಕ ಚಕ್ರ

ಅಶೋಕ ಚಕ್ರ

ನೋಡದೊ ಸ್ವಾತಂತ್ರ್‍ಯಾಕಾಶದಲಿ
ಹಾರುತ್ತಿದೆ ನವ ರಾಷ್ಟ್ರಧ್ವಜವು!
ಹಾರಲಿ! ಏರಲಿ! ಈ ಹೊಸ ಬಾವುಟ!
ಚಿರ ಬಾಳಲಿ ನವ ಭಾರತ ಕೂಟ!

ಹಿಂದೂ ಮುಸ್ಲಿಮ ಸಿಕ್ಕರು ಒಂದು
ಹಿಂದೆ ಇಂದು ಮುಂದೆಂದೆಂದೂ-
ಇಂತು ಸಾರುತಿದೆ ಈ ಹೊಸ ಬಾವುಟ:
ಗೆಲ್ಲಲಿ ಎಲ್ಲರು ಒಂದೆನುವೀ ದಿಟ!

ಬಾರ ಬಾರ ಹರಿಕಾರ ಸಮೀರ
ತಾರ ತಾರ ಬಾವುಟಕ್ಕೆ ವಿಹಾರ
ತೋರ ತೋರ ಬಾವುಟದಾಕಾರ:
ಹಾಡಲಿ ಹರಸಲಿ ಲೋಕವಪಾರ!

ನಿಲ್ಗೆ ಚಂದ್ರತಾರಂಬರಮೀ ಧ್ವಜ
ಪುಣ್ಯಭೂಮಿಯಲಿ ನವ ಕಲ್ಪ ಕುಜ!
ತುಂಬಿ ಬಿಡುತಿರಲಿ ಫಲಪುಷ್ಪವ್ರಜ,
ಆಶ್ರಯ ಹೊಂದಲಿ ಸರ್ವಪ್ರಜಾ.

ಹಸುರು ಬಿಳಿಪು ಕೇಸರಿಗಳು ಕೂಡಿದ
ಮೂಬಣ್ಣದ ನಡುವೆಯಲದೊ ನೋಡು:
‘ಅಶೋಕ ಚಕ್ರ’ವು ಮೆರೆಯುತಿದೆ,
ಶಾಂತಿಯ ಯುಗವನು ತೆರೆಯುತಿದೆ.

ಅಂದು ಅಶೋಕನು ಧರಿಸಿದ ಚಕ್ರ:
ಯುದ್ಧವ ನಿಲಿಸಿದ ಶಾಂತಿಯ ಚಕ್ರ;
ಶಾಂತಿ ಪುಷ್ಟಿ ತುಷ್ಟಿಗಳನು ತುಂಬುವ,
ಭಗವಾನ್ ಬುದ್ಧನ ಧರ್ಮದ ಚಕ್ರ.

ಹಿಂದೆ ಕೃಷ್ಣನೇ ತೋರಿದ ದಾರಿ-
ಗಾಂಧಿ ಮಹಾತ್ಮರು ಎತ್ತಿಹಿಡಿದ ಗುರಿ-
ಸತ್ಯ ಅಹಿಂಸೆ ದಾನ ಧರ್ಮ ದಯೆ:
ಶೋಕವ ಹರಿಸುವ ‘ಅಶೋಕ’ ಚಕ್ರ.

ಯುದ್ಧವನೆಸಗದೆ, ಯಾರನು ಕೊಲ್ಲದೆ,
ಕೊಲ್ಲಬಂದವರ ರಕ್ತವ ಚೆಲ್ಲದೆ,
ಆಳರಸರ ಹೃದಯವ ಮಾರ್ಪಡಿಸಿದ
ದಿವ್ಯಮಂತ್ರವಿದು: ಅಶೋಕ ಚಕ್ರ.

ನಾಡಿನ ದಾಸ್ಯದ ಶೋಕವ ಕಳೆದು
ಹೆರರಿಗೆ ಶೋಕವ ತರುವುದನುಳಿದು
ಶಾಂತಿಯ ಬೆಳಸುವ ಧ್ಯೇಯವ ತಳೆದು
ತಿರುಗುತ ಬೆಳಗುತಲಿಹುದೀ ಚಕ್ರ.

ಭಾರತೀಯ ಸಂಸ್ಕೃತಿಗಿದೆ ಗುರುತು:
ಭೇದಭಾವಗಳನೆಲ್ಲರು ಮರೆತು
ಕೂಡಿ ಬಾಳೆ ಶೋಕವೆ ಹೊರತು:
ಆ ಬಾಳ ತರಲಿ ಈ ಶುಭ ಚಕ್ರ!

ಸತ್ಯ ಅಹಿಂಸೆಗಳಡಿಗಲ್ ಮೇಲೆ
ಸಮತೆಯ ಸೌಧವ ಕಟ್ಟಲು ನಾಳೆ
ಜನತೆಯ ಶೋಕವು ನೀಗುವುದಾಗಳೆ:
ಅದರ ಮುಂಗುರುಹು ಅಶೋಕ ಚಕ್ರ!

ಭಾರತ ಮಾತೆಗೆ ಕಿರೀಟವಿಟ್ಟು
ನಾಡಿಗೆ ನಲ್‌ನಗು ಮುಖವನು ಕೊಟ್ಟು
ವಿಶ್ವಕೆ ಶಾಂತಿಯ ಹರಕೆಯನಿಟ್ಟು
ತಿಗುತ್ತಿರಲಿ ಸನಾತನ ಚಕ್ರ!

ಎನಿತು ಸೂಳು ತಿರುಗಿದುದೀ ಚಕ್ರ,
ಎನಿತು ಸೂಳು ನಿಂತುದೊ ಈ ಚಕ್ರ;
ನಿಲ್ಲದೆ ತಿರುಗಲಿ ಅಶೋಕ ಚಕ್ರ,
ಗೆಲ್ಲಲಿ ಜಗವನೆ ಧರ್ಮದ ಚಕ್ರ!

ಶ್ರೀ ಕೃಷ್ಣ ಬುದ್ಧ ಅಶೋಕ ಗಾಂಧೀ
ಪ್ರಭೃತಿಪ್ರವರ್ತಿತ ಚಕ್ರಕ್ಕೆ ನಮೋ
ಧರ್ಮದ ಚಕ್ರಕೆ ನಮೋ ನಮೋ
ಅಶೋಕ ಚಕ್ರಕೆ ನಮೋ ನಮೋ

ಅಶೋಕ ಚಕ್ರಾಂಕಿತ ಧ್ವಜಕೆ ನಮೋ
ಭಾರತ ಮಾತೆಗೆ ನಮೋ ನಮೋ
ಭಾರತ ಜನತೆಗೆ ತೇಜವನೆರೆದು
ಸಲಹುವ ದೇವಗೆ ನಮೋ ನಮೋ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...