ಅಶೋಕ ಚಕ್ರ

ನೋಡದೊ ಸ್ವಾತಂತ್ರ್‍ಯಾಕಾಶದಲಿ
ಹಾರುತ್ತಿದೆ ನವ ರಾಷ್ಟ್ರಧ್ವಜವು!
ಹಾರಲಿ! ಏರಲಿ! ಈ ಹೊಸ ಬಾವುಟ!
ಚಿರ ಬಾಳಲಿ ನವ ಭಾರತ ಕೂಟ!

ಹಿಂದೂ ಮುಸ್ಲಿಮ ಸಿಕ್ಕರು ಒಂದು
ಹಿಂದೆ ಇಂದು ಮುಂದೆಂದೆಂದೂ-
ಇಂತು ಸಾರುತಿದೆ ಈ ಹೊಸ ಬಾವುಟ:
ಗೆಲ್ಲಲಿ ಎಲ್ಲರು ಒಂದೆನುವೀ ದಿಟ!

ಬಾರ ಬಾರ ಹರಿಕಾರ ಸಮೀರ
ತಾರ ತಾರ ಬಾವುಟಕ್ಕೆ ವಿಹಾರ
ತೋರ ತೋರ ಬಾವುಟದಾಕಾರ:
ಹಾಡಲಿ ಹರಸಲಿ ಲೋಕವಪಾರ!

ನಿಲ್ಗೆ ಚಂದ್ರತಾರಂಬರಮೀ ಧ್ವಜ
ಪುಣ್ಯಭೂಮಿಯಲಿ ನವ ಕಲ್ಪ ಕುಜ!
ತುಂಬಿ ಬಿಡುತಿರಲಿ ಫಲಪುಷ್ಪವ್ರಜ,
ಆಶ್ರಯ ಹೊಂದಲಿ ಸರ್ವಪ್ರಜಾ.

ಹಸುರು ಬಿಳಿಪು ಕೇಸರಿಗಳು ಕೂಡಿದ
ಮೂಬಣ್ಣದ ನಡುವೆಯಲದೊ ನೋಡು:
‘ಅಶೋಕ ಚಕ್ರ’ವು ಮೆರೆಯುತಿದೆ,
ಶಾಂತಿಯ ಯುಗವನು ತೆರೆಯುತಿದೆ.

ಅಂದು ಅಶೋಕನು ಧರಿಸಿದ ಚಕ್ರ:
ಯುದ್ಧವ ನಿಲಿಸಿದ ಶಾಂತಿಯ ಚಕ್ರ;
ಶಾಂತಿ ಪುಷ್ಟಿ ತುಷ್ಟಿಗಳನು ತುಂಬುವ,
ಭಗವಾನ್ ಬುದ್ಧನ ಧರ್ಮದ ಚಕ್ರ.

ಹಿಂದೆ ಕೃಷ್ಣನೇ ತೋರಿದ ದಾರಿ-
ಗಾಂಧಿ ಮಹಾತ್ಮರು ಎತ್ತಿಹಿಡಿದ ಗುರಿ-
ಸತ್ಯ ಅಹಿಂಸೆ ದಾನ ಧರ್ಮ ದಯೆ:
ಶೋಕವ ಹರಿಸುವ ‘ಅಶೋಕ’ ಚಕ್ರ.

ಯುದ್ಧವನೆಸಗದೆ, ಯಾರನು ಕೊಲ್ಲದೆ,
ಕೊಲ್ಲಬಂದವರ ರಕ್ತವ ಚೆಲ್ಲದೆ,
ಆಳರಸರ ಹೃದಯವ ಮಾರ್ಪಡಿಸಿದ
ದಿವ್ಯಮಂತ್ರವಿದು: ಅಶೋಕ ಚಕ್ರ.

ನಾಡಿನ ದಾಸ್ಯದ ಶೋಕವ ಕಳೆದು
ಹೆರರಿಗೆ ಶೋಕವ ತರುವುದನುಳಿದು
ಶಾಂತಿಯ ಬೆಳಸುವ ಧ್ಯೇಯವ ತಳೆದು
ತಿರುಗುತ ಬೆಳಗುತಲಿಹುದೀ ಚಕ್ರ.

ಭಾರತೀಯ ಸಂಸ್ಕೃತಿಗಿದೆ ಗುರುತು:
ಭೇದಭಾವಗಳನೆಲ್ಲರು ಮರೆತು
ಕೂಡಿ ಬಾಳೆ ಶೋಕವೆ ಹೊರತು:
ಆ ಬಾಳ ತರಲಿ ಈ ಶುಭ ಚಕ್ರ!

ಸತ್ಯ ಅಹಿಂಸೆಗಳಡಿಗಲ್ ಮೇಲೆ
ಸಮತೆಯ ಸೌಧವ ಕಟ್ಟಲು ನಾಳೆ
ಜನತೆಯ ಶೋಕವು ನೀಗುವುದಾಗಳೆ:
ಅದರ ಮುಂಗುರುಹು ಅಶೋಕ ಚಕ್ರ!

ಭಾರತ ಮಾತೆಗೆ ಕಿರೀಟವಿಟ್ಟು
ನಾಡಿಗೆ ನಲ್‌ನಗು ಮುಖವನು ಕೊಟ್ಟು
ವಿಶ್ವಕೆ ಶಾಂತಿಯ ಹರಕೆಯನಿಟ್ಟು
ತಿಗುತ್ತಿರಲಿ ಸನಾತನ ಚಕ್ರ!

ಎನಿತು ಸೂಳು ತಿರುಗಿದುದೀ ಚಕ್ರ,
ಎನಿತು ಸೂಳು ನಿಂತುದೊ ಈ ಚಕ್ರ;
ನಿಲ್ಲದೆ ತಿರುಗಲಿ ಅಶೋಕ ಚಕ್ರ,
ಗೆಲ್ಲಲಿ ಜಗವನೆ ಧರ್ಮದ ಚಕ್ರ!

ಶ್ರೀ ಕೃಷ್ಣ ಬುದ್ಧ ಅಶೋಕ ಗಾಂಧೀ
ಪ್ರಭೃತಿಪ್ರವರ್ತಿತ ಚಕ್ರಕ್ಕೆ ನಮೋ
ಧರ್ಮದ ಚಕ್ರಕೆ ನಮೋ ನಮೋ
ಅಶೋಕ ಚಕ್ರಕೆ ನಮೋ ನಮೋ

ಅಶೋಕ ಚಕ್ರಾಂಕಿತ ಧ್ವಜಕೆ ನಮೋ
ಭಾರತ ಮಾತೆಗೆ ನಮೋ ನಮೋ
ಭಾರತ ಜನತೆಗೆ ತೇಜವನೆರೆದು
ಸಲಹುವ ದೇವಗೆ ನಮೋ ನಮೋ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಂಪೆಯಲ್ಲಿ ಮತ್ತೆ
Next post ಇಳಾ – ೧೬

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys