ಓಡಿ ಬಾ

ಕ್ರಾಂತಿ ಕಂದ
ನಿನ್ನ ಅಂದ
ಕಾಣಲೆಂದ
ಕವಿಗೆ ಬಂಧ
ಮುಕ್ತಿ ನೀಡು ಬಾ

ನಗೆಗಡಲಲಿ ನಲಿದು ಬಾ
ಸುಳಿಯೊಡಲಲಿ ಸುಳಿದು ಬಾ
ಮುಗಿಲಲೆಯಲಿ ಮುಳಿದು ಬಾ-ಓಡಿ ಬಾ ||

ಅಂಧಕಾರದಲ್ಲಿ ಬಂದು
ಮುಗಿಲಮಡಿಲಿನಲ್ಲಿ ನಿಂದು
ತಂಬೆಳಕನು ತಂದು ತಂದು
ಎಳೆಯೆಳೆಯಲಿ ಹರಡುವಂತೆ
ಬಾನಿನಲ್ಲಿ ಹೊಳೆವಸಂತೆ ಬಾ….

ಜೀವನದಿಂದುಕ್ಕಿ ಉಕ್ಕಿ
ಸಾವಕಡಲ ಎಣೆಯ ಮಿಕ್ಕಿ
ನೋವನೆಲ್ಲ ಸೆದೆಯನಿಕ್ಕಿ ಬಾ….

ಜೀವನದಲಿ ಸಾವಿನಲ್ಲಿ
ಕನಸಿನಲ್ಲಿ ನನಸಿನಲ್ಲಿ
ಸಪ್ತಜಗಗಳೊಡಲಿನಲ್ಲಿ
ಹರಿಯುತಿರುವ ಹೊನಲೆ ಬಾ
ಕಂದ ಕರೆಯುತಿರುವೆ ಬಾ….

ಗುಡುಗು ಗುಡುಗಿ ಸಿಡಿಲು ಸಿಡಿದು
ವಿಶ್ವಕರ್ಮನೆದೆಯನೊಡೆದು
ಭೂಗರ್ಭದ ಶಾಂತಿ ಕಡೆದು
ಜೀವತಂತಿ ಮಿಡಿದು ಮಿಡಿದು
ಹೊಸ ಜಗವನು ಸೃಜಿಸು ಬಾ
ಓ ಓಡಿಬಾ….

ಕಾವಿಲ್ಲದೆ ಜೀವವೆಲ್ಲಿ
ಕ್ರಾಂತಿ ಕಾವೆ ಬಾ
ನೋವಿಲ್ಲದೆ ಕಾವುದೆಲ್ಲಿ
ನೋವ ನುಡಿಯೆ ಬಾ
ಅಳಿವಿಲ್ಲದೆ ಉಳಿವು ಎಲ್ಲಿ
ಅಳಿವಿನುಳುಮೆ ಬಾ….

ಜೀವ ಸಂಗ್ರಾಮದಲ್ಲಿ
ಬಾಳಿನಿರುಳ ರಂಗದಲ್ಲಿ
ಸುಳಿಗಾಳಿಯ ಮಡುವಿನಲ್ಲಿ
ಸುಳಿಸುಳಿಯುತ ಬಾ
ಸುಖಸೃಜಿಸುವ ಬಾ….

ಬಾಳಬಯಲ ಬಳಸಿ ಸುತ್ತ
ಆಳುತಿರುವ ಗೋಳನತ್ತ
ಬೀಳುಗೊಳಿಸಿ ಅತ್ತ ಇತ್ತ
ನಗೆ ಹೊನಲನು ಹರುಡು ಬಾ

ಸುಖದ ಸುಗ್ಗಿ
ಬೆಳೆದು ಅಳೆದು
ಜೀವ ಹುಗ್ಗಿ
ಅಳೆದು ಅಳೆದು
ಎಲ್ಲ ಚೆಲ್ಲು ಬಾ
ಓ!

ಕ್ರಾಂತಿ ಕಂದ
ನಿನ್ನ ಅಂದ
ಕಾಣ ಲೆಂದ
ಕವಿಗೆ ಬಂಧ
ಮುಕ್ತಿ ನೀಡು ಬಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊಡ್ಡವರು ಸಣ್ಣವರಾಗುವುದೇಕೆ?
Next post ಅರ್ಥ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys