ಮೈಯೊಳಗಿನ ಮಣ್ಣು

ಮೈಯೊಳಗಿನ ಮಣ್ಣು ಆಡಿಸುವುದು ನನ್ನ
ಮೈಯೊಳಗಿನ ಗಾಳಿ ಹಾಡಿಸುವುದು ನನ್ನ
ಜಲ ಆಗಸ ಬೆಂಕಿ, ಸಂಚು ಹೂಡಿ ಮಿಂಚಿ
ಕೂರಿಸುವುದು ಏಳಿಸುವುದು ಓಡಿಸುವುದು ನನ್ನ!

ಪೃಥ್ವಿ ಅಪ್ ತೇಜ ವಾಯು ಆಕಾಶವೆ, ತಾಳಿ
ಹದ ಮೀರದೆ ಕುದಿಕಾರದೆ ಪ್ರೀತಿಯಿಟ್ಟು ಆಳಿ;
ನೀವು ಕೊಟ್ಟ ಪಂಚರಂಗಿಯಲ್ಲಿ ನಿಂತ ನಾನು
ಬೇಡಿಕೊಳುವೆ ನಿಮ್ಮ ಹೀಗೆ ಕೇಳಲಿ ನೆಲ ಬಾನು

ನನ್ನೊಳಗಿನ ಜಲವೆಲ್ಲವು ಸೆಳವು ಕಳೆದು ಹರಿಯಲಿ
ತೇಜವೆಲ್ಲ ಉರಿಯನುಳಿದು ಬರೀ ಬೆಳಕ ಸುರಿಯಲಿ;
ಮಣ್ಣು ಬಣ್ಣ ನೀಗಲಿ, ಗಾಳಿ ದಾಳಿ ನಿಲಿಸಲಿ
ಆಕಾಶದ ತುಂಬ ಶಾಂತ ಬೆಳಕೊಂದೇ ಹರಡಲಿ

ನಾನೆನುವುದು ನೀನಾಗಲಿ, ನೀನೆನುವುದು ಅವನು
ತನ್ನೊಳಗೇ ವಿಶ್ವ ಅರಳಿ ಬೆಳಗಲಲ್ಲಿ ಭಾನು;
ತತ್ವಮಸಿ ತತ್ವಮಸಿ ಎಂಬ ಮಹಾವಾಕ್ಯ
ಅರಿವ ನುಂಗಿ ಮೂಡಲಿ ಅಲೌಕಿಕದ ಸೌಖ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೫೭
Next post ಈ ರಸ್ತೆಗಳೇಕೆ ಹೀಗೆ?

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…