ಹರಿಯುವ ಹೊಳೆಗೂ

ಹರಿಯುವ ಹೊಳೆಗೂ ಸುರಿಯುವ ಮಳೆಗೂ
ಏನೇನಿದೆಯೋ ಸಂಬಂಧ!
ಬೆಳಕಿನ ಹನಿಗೂ ಹಕ್ಕಿಯ ದನಿಗೂ
ಇಲ್ಲವೆ ಹೇಳಿ ಒಳಬಂಧ?

ನಾರುವ ಕಸಕೂ, ಹೂ ಪರಿಮಳಕೂ
ಇದ್ದೇ ಇದೆ ಬಿಡಿ ಮಾತುಕಥೆ;
ಹಣ್ಣಿನ ಒಳಗೇ ಬೀಜವಿಡಲು ಮರ
ಉಪಾಯವಲ್ಲದೆ ಇದ್ದೀತೇ?

ಕುಡಿಯಲು ಬಾರದ ಕಡಲಿನ ನೀರಿನ
ಹಿಂದೂ ಒಂದಿದೆ ಒಳಮರ್ಮ
ಮುಂದಿನ ಸಾಲಿನ ಮುಗಿಲಿನ ಬೆಳೆಗೆ
ಕೂಡಿಸಿ ಇಡುವ ಜಲಧರ್ಮ

ಬಲ್ಲೆವೆ ನಾವು ಸೃಷ್ಟಿಯ ಮರೆಯಲಿ
ಯಾರೋ ಹೂಡಿದ ಗುಟ್ಟುಗಳ?
ಬಲ್ಲೆವೆ ಹೇಳಿ ಸೃಷ್ಟಿಯ ಹಾಡಲು
ದೈವವು ಬಳಸುವ ಮಟ್ಟುಗಳ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೬೨
Next post ಎರಡು ದಂಡೆಗಳ ನಡುವೆ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…