ಕೆಸರಲಿ ಕಾಯುವ ಕಮಲದ ಕೆನ್ನೆಗೆ

ಕೆಸರಲಿ ಕಾಯುವ ಕಮಲದ ಕೆನ್ನೆಗೆ
ಬಾನಿನ ಹನಿಮುತ್ತು
ಮಿಸುಕಲು ಬಾರದ ಬೆಟ್ಟದ ನೆತ್ತಿಗು
ಹೂಬಿಸಿಲಿನ ಸುತ್ತು

ಬಿರಿಯಲು ಕಾದಿಹ ಮೊಗ್ಗಿನ ಬದಿಗೇ
ದುಂಬಿಯ ದನಿಹೊರಳು
ಕಾಯಿಯ ನೆತ್ತಿಯ ತಾಯಿಯ ಹಾಗೆ
ಕಾಯುವ ಎಲೆನೆರಳು

ಕಾಡಿನ ಮಡಿಲಲಿ ಸಾವಿರ ಜೀವ
ಎಲ್ಲಕು ಆಹಾರ!
ಯಾರೂ ಹಣಿಕದ ಜಾಗದಲ್ಲಿದ್ದರು
ಅವಕೂ ಸಿಂಗಾರ!

ನನಗೂ ನಿನಗೂ ಏನೋ ಗೊತ್ತಿದೆ
ಈ ಸೃಷ್ಟಿಯ ಮರ್ಮ?
ನೀರಿಗು ಗಾಳಿಗು ಬಾನಿನ ತಾರೆಗು
ಉಸಿರಾಗಿಹ ಧರ್ಮ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೬೩
Next post ಕಣಜಿರಿಗೆ ಹುಳು ಮತ್ತು ನಾನು

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…