ಪ್ರತಿ ಹೂವೂ ಸಾರುತ್ತಿದೆ

ಪ್ರತಿ ಹೂವೂ ಸಾರುತ್ತಿದೆ ಭಗವಂತನ ಚೆಲುವ
ಪ್ರತಿ ಬೆಳಗೂ ಹಾಡುತ್ತಿದೆ ಭಗವಂತನ ಒಲವ
ಹರಿವ ನೀರು, ಸುಳಿವ ಗಾಳಿ
ತಿರುಗುವ ಋತು ಚಕ್ರ
ಮಾತಿಲ್ಲದೆ ಸೂಚಿಸುತಿವೆ ಭಗವಂತನ ನಿಲುವ.

ಕೋಟಿ ತಾರೆ ಬಾನಿನಲ್ಲಿ, ಭೂಮಿಯೊಂದು ಚಿಕ್ಕಿ
ನೀಲಿಬಾನಿನಲ್ಲಿ ಸುಳಿದ ಹಾಗೆ ಪುಟ್ಟ ಹಕ್ಕಿ.
ಇಂಥ ಪುಟ್ಟ ಚಿಕ್ಕೆಯಲ್ಲು
ಏನಿದೀ ವ್ಯವಸ್ಥೆ,
ಕಾಣದಂತೆ ತೆರೆದಿದೆ ಪ್ರತಿ ಜೀವಕು ರಸ್ತೆ!

ಒಂದೇ ಸಮ ತಿರುಗುತ್ತಿದೆ ಕುಂಬಾರನ ಚಕ್ರ
ಏಳುತ್ತಿದೆ ಇಡೀ ಸೃಷ್ಟಿ ಬಗೆ ಬಗೆ ರುಚಿ ಗಾತ್ರ
ಹಿರಿದು ಕಿರಿದು ಹಗುರ ಭಾರ
ಬೇರೆ ಬೇರೆ ಕಾರ್ಯ
ಬೆಳಕನೀವ ಎಲ್ಲಕ್ಕೂ ಒಂದೇ ಸಮ ಸೂರ್ಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೬೪
Next post ಮಗಳು ಬರೆದ ಕವಿತೆ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…