ಪ್ರತಿ ಹೂವೂ ಸಾರುತ್ತಿದೆ

ಪ್ರತಿ ಹೂವೂ ಸಾರುತ್ತಿದೆ ಭಗವಂತನ ಚೆಲುವ
ಪ್ರತಿ ಬೆಳಗೂ ಹಾಡುತ್ತಿದೆ ಭಗವಂತನ ಒಲವ
ಹರಿವ ನೀರು, ಸುಳಿವ ಗಾಳಿ
ತಿರುಗುವ ಋತು ಚಕ್ರ
ಮಾತಿಲ್ಲದೆ ಸೂಚಿಸುತಿವೆ ಭಗವಂತನ ನಿಲುವ.

ಕೋಟಿ ತಾರೆ ಬಾನಿನಲ್ಲಿ, ಭೂಮಿಯೊಂದು ಚಿಕ್ಕಿ
ನೀಲಿಬಾನಿನಲ್ಲಿ ಸುಳಿದ ಹಾಗೆ ಪುಟ್ಟ ಹಕ್ಕಿ.
ಇಂಥ ಪುಟ್ಟ ಚಿಕ್ಕೆಯಲ್ಲು
ಏನಿದೀ ವ್ಯವಸ್ಥೆ,
ಕಾಣದಂತೆ ತೆರೆದಿದೆ ಪ್ರತಿ ಜೀವಕು ರಸ್ತೆ!

ಒಂದೇ ಸಮ ತಿರುಗುತ್ತಿದೆ ಕುಂಬಾರನ ಚಕ್ರ
ಏಳುತ್ತಿದೆ ಇಡೀ ಸೃಷ್ಟಿ ಬಗೆ ಬಗೆ ರುಚಿ ಗಾತ್ರ
ಹಿರಿದು ಕಿರಿದು ಹಗುರ ಭಾರ
ಬೇರೆ ಬೇರೆ ಕಾರ್ಯ
ಬೆಳಕನೀವ ಎಲ್ಲಕ್ಕೂ ಒಂದೇ ಸಮ ಸೂರ್ಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೬೪
Next post ಮಗಳು ಬರೆದ ಕವಿತೆ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys