ಹೂಗಳು ಬಾಡಿಲ್ಲ

ಸಾವು ಬೇಡುವ ಭೂಮಿ
ಸುಡುಗಾಡು ಇದು
ಕೊಟ್ಟದ್ದನ್ನು ಪಡೆದು ಲೆಕ್ಕವಿಡುತ್ತಿದೆ

ಬೆಳ್ಳಂಬೆಳಿಗ್ಗೆ
ಮೂರು ವರ್ಷದ ಕೆಂಚ
ಈರಿಯ ಮಗ
ಹೊಲೆಗೇರಿಯಲ್ಲಿ ಊಟವಿಲ್ಲದೆ
ಸತ್ತ
ಸಮಾಧಿ ಮೇಲೆ ಹೂಗಳು ಬಾಡಿಲ್ಲ

ಮಟ ಮಟ ಮಧ್ಯಾಹ್ನ
ಇಪತ್ತರ ಹರೆಯದ ಕರಿಯ
ಮಾರನ ಮಗ
ಕುರುಬಗೇರಿಯಲಿ ಖಾಯಿಲೆ ಬಿದ್ದು
ಸತ್ತ
ಸಮಾಧಿ ಮೇಲೆ ಹೂಗಳು ಬಾಡಿಲ್ಲ

ಗುದ್ದಲಿ ಹೆಗಲೇರಿಸಿ
ಗುದ್ದು ತೋಡಲು ಹೋದ
ಆ ನಾಲ್ಕು ಜನ
ತಿರುಗಿ ಬಂದಿಲ್ಲ
ಅವರ ಹಸಿವಿಗೆ ಬುತ್ತಿ ಹೊರಬೇಕು

ಹೊತ್ತು ಮುಳುಗುವುದರೊಳಗೆ
ಇನ್ನಾರ ಸಾವೋ?
ಉರಿವ ಸೂರ್ಯನದ್ದೋ
ಚಿಮಣಿ ದೀಪದ್ದೋ
ಒಲೆಯ ಬೆಂಕಿಯದ್ದೋ;
ಯಾವ ಗುಡಿಸಲ ಮುಂದೆ
ಅಲಾಯಿ ಕುಣಿತವೋ?

ದೊಡ್ಡ ಮನೆಯ ತೋರಣ
ನಗುತ್ತಲೇ ಇದೆ
ಮುಚ್ಚಿದ ಬಾಗಿಲ ಮುಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಜೆ ಹಣ್ಣಾಗಿ ಬಿಸಿಲು ಹೊನ್ನಾಗಿ
Next post ಮೊದಲ ಪಯಣ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys