ಹೂಗಳು ಬಾಡಿಲ್ಲ

ಸಾವು ಬೇಡುವ ಭೂಮಿ
ಸುಡುಗಾಡು ಇದು
ಕೊಟ್ಟದ್ದನ್ನು ಪಡೆದು ಲೆಕ್ಕವಿಡುತ್ತಿದೆ

ಬೆಳ್ಳಂಬೆಳಿಗ್ಗೆ
ಮೂರು ವರ್ಷದ ಕೆಂಚ
ಈರಿಯ ಮಗ
ಹೊಲೆಗೇರಿಯಲ್ಲಿ ಊಟವಿಲ್ಲದೆ
ಸತ್ತ
ಸಮಾಧಿ ಮೇಲೆ ಹೂಗಳು ಬಾಡಿಲ್ಲ

ಮಟ ಮಟ ಮಧ್ಯಾಹ್ನ
ಇಪತ್ತರ ಹರೆಯದ ಕರಿಯ
ಮಾರನ ಮಗ
ಕುರುಬಗೇರಿಯಲಿ ಖಾಯಿಲೆ ಬಿದ್ದು
ಸತ್ತ
ಸಮಾಧಿ ಮೇಲೆ ಹೂಗಳು ಬಾಡಿಲ್ಲ

ಗುದ್ದಲಿ ಹೆಗಲೇರಿಸಿ
ಗುದ್ದು ತೋಡಲು ಹೋದ
ಆ ನಾಲ್ಕು ಜನ
ತಿರುಗಿ ಬಂದಿಲ್ಲ
ಅವರ ಹಸಿವಿಗೆ ಬುತ್ತಿ ಹೊರಬೇಕು

ಹೊತ್ತು ಮುಳುಗುವುದರೊಳಗೆ
ಇನ್ನಾರ ಸಾವೋ?
ಉರಿವ ಸೂರ್ಯನದ್ದೋ
ಚಿಮಣಿ ದೀಪದ್ದೋ
ಒಲೆಯ ಬೆಂಕಿಯದ್ದೋ;
ಯಾವ ಗುಡಿಸಲ ಮುಂದೆ
ಅಲಾಯಿ ಕುಣಿತವೋ?

ದೊಡ್ಡ ಮನೆಯ ತೋರಣ
ನಗುತ್ತಲೇ ಇದೆ
ಮುಚ್ಚಿದ ಬಾಗಿಲ ಮುಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಜೆ ಹಣ್ಣಾಗಿ ಬಿಸಿಲು ಹೊನ್ನಾಗಿ
Next post ಮೊದಲ ಪಯಣ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…