Home / ಕವನ / ಕವಿತೆ / ಮೂರು ಲಂಗಗಳ ಮಾತುಕತೆ

ಮೂರು ಲಂಗಗಳ ಮಾತುಕತೆ

ಲಂಗ ೧

‘ಏನೇ
ಇಷ್ಟೊಂಽಽಽದು ಘಮ್ ಅಂತೀಯಾ
ರಾತ್ರಿಯೆಲ್ಲಾ ಜೋರಾಽಽಽ?

ಒಂದಕ್ಕೊಂದು ಗಂಟು ಹಾಕಿ
ದ ಗಂಟಿನೊಳಗೇ ಕುಳಿತು
ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ
ಗಂಟು ಮೋರೆಯ ಸಡಿಲಿಸುತ

ಲಂಗ ೨

‘ಅದು ಬ್ಯಾರೆ ಕೇಡು ಈ ಜನುಮಕ್ಕೆ
ನಾನೇನು
ನಿನ್‌ಥರ
ಇದ್ದವರ ಮನೆಯ ಮಗಳಾ?
ಬೆಳಗೆದ್ರೆ ನೀರು ಬರಲಿಲ್ಲ
ತರಕಾರಿ ತರಲಿಲ್ಲ
ಹಾಲು ಸಿಗಲಿಲ್ಲ
ಕರೆಂಟು ಬಿಲ್ಲು ಕಟ್ಟಲಿಲ್ಲ
ನೂಽಽಽರು ರಗಳೆ
ಸಂಜೆ ಟ್ಯೂಷನ್ನಿಗೋದ ಮಕ್ಕಳು
ಮನೆ ಸೇರುವವರೆಗೂ ಜೀವವಿಲ್ಲ
ಕುಡಿದು ತೂರಾಡುವ ಗಂಡ
ನಿಗೆ ಕಾದ ಮೈ
ಕೆಂಡವಾಗಿದ್ದಷ್ಟೇ ಪುಣ್ಯ
ಉಫ್… ನನ್ ಹಣೆ ಬರಹ’

ಮುದುಡಿಕೊಂಡಿದ್ದ ಕೆಂಪು
ಲಂಗದ ಕಡೆ ಮುಖ ತಿರುವಿ
‘ನೀನೇನು
ಎಷ್ಟೊಂದು ಮೆತ್ತಗಾಗಿದ್ದೀಯಾ
ಏನ್ ಸಮಾಚಾರ, ಸುಸ್ತಾ…?’

ಲಂಗ ೩
ತೂಕಡಿಸುವ ಕಣ್ಣುಗಳನ್ನು ಉಜ್ಜಿಕೊಳ್ಳುತ್ತಾ
ಮೂಲೋಕ ಕಾಣುವಂತೆ ಆಕಳಿಸುತ್ತಾ

‘ನನ್ ಸುಸ್ತು ಯಾರ್ ಕೇಳ್ತಾರೆ ಬಿಡಕ್ಕ
ನನಗೋ
ಗಂಟೆಗೊಬ್ಬ ಗೆಳೆಯ
ಅವ ತಂದಿದ್ದು ಉಡುವುದೊರೊಳಗೆ
ಇವ ಕೈ ಮಾಡಿ ಕರೆಯುತ್ತಾನೆ
ಬಾಗಿಲಲ್ಲಿ ಹೂ ಹಿಡಿದು ನಿಲ್ಲುತ್ತಾನೆ

ಇನ್ನೊಬ್ಬ ಕಚ್ಚೆಗೇ ಕೈ ಹಾಕುತ್ತಾನೆ…
ರಾತ್ರಿಯೆಲ್ಲಾಽಽಽ
ಜೀವವಿಲ್ಲದ ಗೊಂಬೆಯಂತೆ
ಗಾಳಿ ಇಲ್ಲದ ಚೆಂಡಿನಂತೆ
ಹಾಸಿಗೆ ತುಂಬಾ ಅವರ ಬುಡಕ್ಕೆ
ಹರಕೆ ಹೊತ್ತವಳಂತೆ ಉರುಳಾಡಿ
ಪ್ರತಿನಿತ್ಯ ಜಾಗರಣೆ
ನಂದೂ ಒಂದು ಬದುಕು
ಅಂತ ಯಾರ್ಗೇಳಾಣ…?’

*

ಉಳಿದ ಲಂಗಗಳು ಮೂಕವಾಗಿ
ಬಾಯಿ ತೆರೆದು ಕೇಳುತ್ತಿರುವಂತೇ
ಎದುರು ಲಂಗದ ಕಣ್ಣಲ್ಲಿ
ಎರಡು ಹನಿ ಉದುರುವ ಮುನ್ನ
ಅಗಸಗಿತ್ತಿ
ಸರಬರನೆ ಎಲ್ಲರನು ಎತ್ತಿ
ಕುದಿವ ಹಂಡೆಯೊಳಗೆ ಒತ್ತಿ
ಕೈ ತೊಳೆದುಕೊಂಡು
ತನ್ನ ಹರಕು ಲಂಗಕ್ಕೆ
ಒರೆಸಿಕೊಂಡಳು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...