Home / ಕವನ / ಕವಿತೆ / ಮೂರು ಲಂಗಗಳ ಮಾತುಕತೆ

ಮೂರು ಲಂಗಗಳ ಮಾತುಕತೆ

ಲಂಗ ೧

‘ಏನೇ
ಇಷ್ಟೊಂಽಽಽದು ಘಮ್ ಅಂತೀಯಾ
ರಾತ್ರಿಯೆಲ್ಲಾ ಜೋರಾಽಽಽ?

ಒಂದಕ್ಕೊಂದು ಗಂಟು ಹಾಕಿ
ದ ಗಂಟಿನೊಳಗೇ ಕುಳಿತು
ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ
ಗಂಟು ಮೋರೆಯ ಸಡಿಲಿಸುತ

ಲಂಗ ೨

‘ಅದು ಬ್ಯಾರೆ ಕೇಡು ಈ ಜನುಮಕ್ಕೆ
ನಾನೇನು
ನಿನ್‌ಥರ
ಇದ್ದವರ ಮನೆಯ ಮಗಳಾ?
ಬೆಳಗೆದ್ರೆ ನೀರು ಬರಲಿಲ್ಲ
ತರಕಾರಿ ತರಲಿಲ್ಲ
ಹಾಲು ಸಿಗಲಿಲ್ಲ
ಕರೆಂಟು ಬಿಲ್ಲು ಕಟ್ಟಲಿಲ್ಲ
ನೂಽಽಽರು ರಗಳೆ
ಸಂಜೆ ಟ್ಯೂಷನ್ನಿಗೋದ ಮಕ್ಕಳು
ಮನೆ ಸೇರುವವರೆಗೂ ಜೀವವಿಲ್ಲ
ಕುಡಿದು ತೂರಾಡುವ ಗಂಡ
ನಿಗೆ ಕಾದ ಮೈ
ಕೆಂಡವಾಗಿದ್ದಷ್ಟೇ ಪುಣ್ಯ
ಉಫ್… ನನ್ ಹಣೆ ಬರಹ’

ಮುದುಡಿಕೊಂಡಿದ್ದ ಕೆಂಪು
ಲಂಗದ ಕಡೆ ಮುಖ ತಿರುವಿ
‘ನೀನೇನು
ಎಷ್ಟೊಂದು ಮೆತ್ತಗಾಗಿದ್ದೀಯಾ
ಏನ್ ಸಮಾಚಾರ, ಸುಸ್ತಾ…?’

ಲಂಗ ೩
ತೂಕಡಿಸುವ ಕಣ್ಣುಗಳನ್ನು ಉಜ್ಜಿಕೊಳ್ಳುತ್ತಾ
ಮೂಲೋಕ ಕಾಣುವಂತೆ ಆಕಳಿಸುತ್ತಾ

‘ನನ್ ಸುಸ್ತು ಯಾರ್ ಕೇಳ್ತಾರೆ ಬಿಡಕ್ಕ
ನನಗೋ
ಗಂಟೆಗೊಬ್ಬ ಗೆಳೆಯ
ಅವ ತಂದಿದ್ದು ಉಡುವುದೊರೊಳಗೆ
ಇವ ಕೈ ಮಾಡಿ ಕರೆಯುತ್ತಾನೆ
ಬಾಗಿಲಲ್ಲಿ ಹೂ ಹಿಡಿದು ನಿಲ್ಲುತ್ತಾನೆ

ಇನ್ನೊಬ್ಬ ಕಚ್ಚೆಗೇ ಕೈ ಹಾಕುತ್ತಾನೆ…
ರಾತ್ರಿಯೆಲ್ಲಾಽಽಽ
ಜೀವವಿಲ್ಲದ ಗೊಂಬೆಯಂತೆ
ಗಾಳಿ ಇಲ್ಲದ ಚೆಂಡಿನಂತೆ
ಹಾಸಿಗೆ ತುಂಬಾ ಅವರ ಬುಡಕ್ಕೆ
ಹರಕೆ ಹೊತ್ತವಳಂತೆ ಉರುಳಾಡಿ
ಪ್ರತಿನಿತ್ಯ ಜಾಗರಣೆ
ನಂದೂ ಒಂದು ಬದುಕು
ಅಂತ ಯಾರ್ಗೇಳಾಣ…?’

*

ಉಳಿದ ಲಂಗಗಳು ಮೂಕವಾಗಿ
ಬಾಯಿ ತೆರೆದು ಕೇಳುತ್ತಿರುವಂತೇ
ಎದುರು ಲಂಗದ ಕಣ್ಣಲ್ಲಿ
ಎರಡು ಹನಿ ಉದುರುವ ಮುನ್ನ
ಅಗಸಗಿತ್ತಿ
ಸರಬರನೆ ಎಲ್ಲರನು ಎತ್ತಿ
ಕುದಿವ ಹಂಡೆಯೊಳಗೆ ಒತ್ತಿ
ಕೈ ತೊಳೆದುಕೊಂಡು
ತನ್ನ ಹರಕು ಲಂಗಕ್ಕೆ
ಒರೆಸಿಕೊಂಡಳು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...