Home / ಕವನ / ಕವಿತೆ / ಮೂರು ಲಂಗಗಳ ಮಾತುಕತೆ

ಮೂರು ಲಂಗಗಳ ಮಾತುಕತೆ

ಲಂಗ ೧

‘ಏನೇ
ಇಷ್ಟೊಂಽಽಽದು ಘಮ್ ಅಂತೀಯಾ
ರಾತ್ರಿಯೆಲ್ಲಾ ಜೋರಾಽಽಽ?

ಒಂದಕ್ಕೊಂದು ಗಂಟು ಹಾಕಿ
ದ ಗಂಟಿನೊಳಗೇ ಕುಳಿತು
ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ
ಗಂಟು ಮೋರೆಯ ಸಡಿಲಿಸುತ

ಲಂಗ ೨

‘ಅದು ಬ್ಯಾರೆ ಕೇಡು ಈ ಜನುಮಕ್ಕೆ
ನಾನೇನು
ನಿನ್‌ಥರ
ಇದ್ದವರ ಮನೆಯ ಮಗಳಾ?
ಬೆಳಗೆದ್ರೆ ನೀರು ಬರಲಿಲ್ಲ
ತರಕಾರಿ ತರಲಿಲ್ಲ
ಹಾಲು ಸಿಗಲಿಲ್ಲ
ಕರೆಂಟು ಬಿಲ್ಲು ಕಟ್ಟಲಿಲ್ಲ
ನೂಽಽಽರು ರಗಳೆ
ಸಂಜೆ ಟ್ಯೂಷನ್ನಿಗೋದ ಮಕ್ಕಳು
ಮನೆ ಸೇರುವವರೆಗೂ ಜೀವವಿಲ್ಲ
ಕುಡಿದು ತೂರಾಡುವ ಗಂಡ
ನಿಗೆ ಕಾದ ಮೈ
ಕೆಂಡವಾಗಿದ್ದಷ್ಟೇ ಪುಣ್ಯ
ಉಫ್… ನನ್ ಹಣೆ ಬರಹ’

ಮುದುಡಿಕೊಂಡಿದ್ದ ಕೆಂಪು
ಲಂಗದ ಕಡೆ ಮುಖ ತಿರುವಿ
‘ನೀನೇನು
ಎಷ್ಟೊಂದು ಮೆತ್ತಗಾಗಿದ್ದೀಯಾ
ಏನ್ ಸಮಾಚಾರ, ಸುಸ್ತಾ…?’

ಲಂಗ ೩
ತೂಕಡಿಸುವ ಕಣ್ಣುಗಳನ್ನು ಉಜ್ಜಿಕೊಳ್ಳುತ್ತಾ
ಮೂಲೋಕ ಕಾಣುವಂತೆ ಆಕಳಿಸುತ್ತಾ

‘ನನ್ ಸುಸ್ತು ಯಾರ್ ಕೇಳ್ತಾರೆ ಬಿಡಕ್ಕ
ನನಗೋ
ಗಂಟೆಗೊಬ್ಬ ಗೆಳೆಯ
ಅವ ತಂದಿದ್ದು ಉಡುವುದೊರೊಳಗೆ
ಇವ ಕೈ ಮಾಡಿ ಕರೆಯುತ್ತಾನೆ
ಬಾಗಿಲಲ್ಲಿ ಹೂ ಹಿಡಿದು ನಿಲ್ಲುತ್ತಾನೆ

ಇನ್ನೊಬ್ಬ ಕಚ್ಚೆಗೇ ಕೈ ಹಾಕುತ್ತಾನೆ…
ರಾತ್ರಿಯೆಲ್ಲಾಽಽಽ
ಜೀವವಿಲ್ಲದ ಗೊಂಬೆಯಂತೆ
ಗಾಳಿ ಇಲ್ಲದ ಚೆಂಡಿನಂತೆ
ಹಾಸಿಗೆ ತುಂಬಾ ಅವರ ಬುಡಕ್ಕೆ
ಹರಕೆ ಹೊತ್ತವಳಂತೆ ಉರುಳಾಡಿ
ಪ್ರತಿನಿತ್ಯ ಜಾಗರಣೆ
ನಂದೂ ಒಂದು ಬದುಕು
ಅಂತ ಯಾರ್ಗೇಳಾಣ…?’

*

ಉಳಿದ ಲಂಗಗಳು ಮೂಕವಾಗಿ
ಬಾಯಿ ತೆರೆದು ಕೇಳುತ್ತಿರುವಂತೇ
ಎದುರು ಲಂಗದ ಕಣ್ಣಲ್ಲಿ
ಎರಡು ಹನಿ ಉದುರುವ ಮುನ್ನ
ಅಗಸಗಿತ್ತಿ
ಸರಬರನೆ ಎಲ್ಲರನು ಎತ್ತಿ
ಕುದಿವ ಹಂಡೆಯೊಳಗೆ ಒತ್ತಿ
ಕೈ ತೊಳೆದುಕೊಂಡು
ತನ್ನ ಹರಕು ಲಂಗಕ್ಕೆ
ಒರೆಸಿಕೊಂಡಳು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...