ಗರಿಯೊಡೆದ ಹಕ್ಕಿ

ಬಣ್ಣ ಬಣ್ಣದ ಹೂಗಳು, ಗಾಜಿನ ಚೂರುಗಳು
ಚಿತ್ತಾರದ ಗರಿಗಳು
ತರಾವರಿ ಬೆಣಚುಕಲ್ಲು, ಸಿಂಪಿ
ಕವಡಿಗಳ ತಂದು ಸಂಭ್ರಮಿಸುವ-

ಮುಂಜಾವಿನ ಮಂಜು
ಮುಸ್ಸಂಜೆಯ ಕೆಂಪು ಪ್ರೀತಿಸುವ-
ಆಕಾಶದಂಗಳದೊಳು ಹಾರಾಡಿ
ಏನೆಲ್ಲಾ ಬಾಚಿ ತಬ್ಬಿಕೊಳ್ಳುವ
ಕನಸುಗಳಿಗೆ ಕಾವೂಡಿಸುವ
ಹದಿಹರೆಯದ ವಯಸ್ಸು, ಮುದಗೊಳ್ಳುವ ಮನಸ್ಸು.

ನೋಡ ನೋಡುತಿರೆ
ನೆಲದೆದೆಯಿಂದ ಆಕಾಶದಂಗಳಕೆ ನೆಗೆತ
ಸಂತಸ, ಭಯ, ಬೆರಗು, ವಿಸ್ಮಯಗಳ ಆವರಿಕೆ.
ಸಡಗರ ಸಂಭ್ರಮಗಳ ಬಳ್ಳಿ ಹೆಣೆಯುವಿಕೆ
ಮಾತು ಮೂಕವಾಗಿ ಮೌನವೇ ಮಾತನಾಡುತಾ
ಕನಸುಗಳು ಬೀಜೊಡೆಯುವಿಕೆಗೆ
ಉತ್ಸಾಹದ ಪನ್ನೀರು–
ಹದನಾದ ನಾಡಿ ಬಡಿತದ
ಗರಿಯೊಡೆದ ಹಕ್ಕಿ ನಾನೀಗ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸಿಲಿಲ್ಲದ ಬಾಗಿಲು
Next post ಬೇಡ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…