Home / ಕವನ / ಕವಿತೆ / ನಿಜಬುದ್ಧ

ನಿಜಬುದ್ಧ

ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ
ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ,
ಆನಂದ ಪ್ರಶ್ನಿಸಿದ “ಗುರುದೇವ, ಹೃದಯದಲಿ
ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!”
ಬುದ್ಧದೇವನು ಆಗ ಚಂದ್ರಮನ ಎಳೆನಗುವ   ೫
ನಕ್ಕು ಪೇಳಿದನಿಂತು – “ಆನಂದ, ಅಂತಹುದು
ಸಂದೇಹವೇನಿಹುದು? – ಮನವ ಮುರಿವಂತಹುದು!
ಅರಿತಿದ್ದರದಕಾನು ಉತ್ತರವ ಹೇಳುವೆನು”
“ಗುರುದೇವ! ಜೀವನದಿ ಎಲ್ಲರೊಡನಾಡುತಲಿ
ಕಾಮಕ್ರೋಧದ ಕ್ರೂರ ಅಲೆಗಳಪ್ಪಳಿಸಿದರು   ೧೦
ಕಲ್ಬಂಡೆಯಂತಿರುವ ಯೋಗವೇ ಮೇಲಹುದೊ?
ಮೇಣ್, ಜಗಕೆ ದೂರಾಗಿ ಜ್ಞಾನಪಡೆವುದು ಮೇಲೊ?”
“ಆನಂದ, ಸಂದೇಹ ತಿಳುಹಿದುದೆ ಮೇಲಾಯ್ತು!
ನಾನು ಜಗವನೆ ತೊರೆದು ದೂರ ಕಾಡನು ಸೇರಿ
ಬುದ್ಧನಾದುದು ನಿನಗೆ ಅರಿತಿಹುದು …..ಎನಗಲ್ಲಿ,   ೧೫
ಕಾನನದಿ ಮಾಯೆಗಳು ಬಂಧನಗಳಿರಲಿಲ್ಲ!
ರಾಹುಲ ಯಶೋಧರರ ಮಾಯೆಯನು ಒಡೆಯಲಿಕೆ
ಕಾಡಿಗೋಡಿದೆ ನಾನು! – ಅದು ಹಿರಿಮೆಯೇನಲ್ಲ!
ಪತ್ನಿ ಪುತ್ರರ ಕೂಡ ನಿಂತು ತನ್ನನು ಗೆಲುವ
ಯೋಗವೇ ಮೇಲಹುದು! ಬುದ್ಧನಾದರು ಮತ್ತೆ   ೨೦
ಅರಿತುದನು ಬಿತ್ತಲಿಕೆ ಜನತೆಯೇನೆಲನೆಮಗೆ!
ಜನತೆಯೊಡಲಲಿ ಹುಟ್ಟಿ, ಜನತೆ ಮಡಿಲಲಿ ಬೆಳೆದು,
ಜನತೆಯೆಡೆಯೇ ಉಳಿದು, ಜನತೆಯಡಿ ಮುಂದೊಯ್ವ
ಜ್ಞಾನ ಕರ್ಮಿಯು ಬುದ್ಧ! – ಮುಂದೆ ಬರುವವನವನು!
ಹಗಲು ಹುಟ್ಟುವ ಮುನ್ನ ಅರುಣನಿಣುಕುವ ಹಾಗೆ   ೨೫
ಮುಂದೆ ಜನಿಸುವ ಅವನ ಆಗಮನ ಸೂಚಿಸಲು
ನಾಬಂದೆ! ಆನಂದ- ಈಗ ನಿನಗರಿವಾಯ್ತೆ?
ಜಗದ ನಿಜವನು ಅರಿತ ನಿಜಬುದ್ಧ ಬರುತಿಹನು!
ಜಗವ ನಿಜದಲಿ ನಡೆಪ ಆನಂದ ನನಗಿಲ್ಲ-
ಆತನಿಗೆ ಮೀಸಲದು!”  ಆನಂದ ನಡುವಿನಲಿ   ೩೦
ಬಾಯಿಟ್ಟು ಪ್ರಶ್ನಿಸಿದ, “ಗುರುದೇವ, ಆತನನು
ವರ್ಣಿಪಿರ? – ಎಂತಿರುವ ಆ ಬುದ್ಧ-ನಿಜಬುದ್ಧ?
ಜಗದ ನಡೆನುಡಿಬೆರೆತ, ಜಗದ ಸತ್ಯವನರಿತ
ಜಗದ ಕೂಸಾಬುದ್ಧ ಎಲ್ಲಿ ಜನಿಸಿಹನವನು?”
ಬುದ್ಧ ನಸುನಕ್ಕಿಂತು ಪೇಳಿದನು ಉತ್ತರವ-   ೩೫
“ನಡುವಿಂದ ಮೊಳಕಾಲವರೆಗಿಳಿವ ಬಿಳಿವಸ್ತ್ರ
ತನ್ನ ಕೈಯಿಂ ತಾನೆ ನೂತುನೇದುದು ಖಾದಿ!
ಮೇಲ್ಹೊದಿಕೆ-ಮತ್ತೊಂದು-ಬಿಳಿಯ ಖಾದಿಯ ಚೌಕ
ವಿಶ್ವದಿಗ್ವಜಯಕ್ಕೆ ಹೊರಟ ಸನ್ಯಾಸಿಯವ,
ಕೈಯಲ್ಲಿ ದಂಡವಿದೆ-ಮುಖಬತ್ತಿ ಬಾಡಿಹುದು   ೪೦
ಯೌವನದ ತೇಜವಿದೆ-ಬ್ರಹ್ಮಚರ್‍ಯದ ತೇಜ!
ಮಡದಿಯನು ಮಾತೆಯೊಲು ಕಾಣವವನಾ ತೇಜ!
ಹೃಯದಲಿ ಹಿರಿಕೆಚ್ಚು-ಸ್ವಾತಂತ್ರ್‍ಯದಾ ಕಿಚ್ಚು
ಅದೊ ಆತ ಬರುತಲಿಹ ಈ ಎಡೆಗೆ ನೋಡಲ್ಲಿ
ಭಾರತಿಯ ಹಿರಿಯಮಗ-ಕಿರಿಯಮಕ್ಕಳು ನೋಡು   ೪೫
ಎನಿತು ಜನ ದಂಡಾಗಿ ಹಿಂದೆ ಸಾಗುತಲಿಹರು-
ಬುದ್ಧನವ! – ನಿಜಬುದ್ಧ! ನಾನವನ ಜನ್ಮವನು
ಸೂಚಿಸಲು ಬಂದಿದ್ದ ಮುಂಜಾನೆ! – ಆನಂದ!”
-ಅಷ್ಟರಲೆ ಕನಸೊಡೆದು ಎಚ್ಚೆತ್ತು ನೋಡಿದೆನು
ಸೆರೆಮನೆಯ ಹೊರಬದಿಗೆ ಕಾವಲಿನ ಪೋಲೀಸ   ೫೦
ನಡೆದ ಬೂಟ್ಸಿನ ಸದ್ದು ರಾತ್ರಿಯಾ ಕಡುಮೌನ
ಭೇದಿಸುತ ಬರುತಿತ್ತು- ಸುಂದರ ದಿಗಂತದಲಿ
ನಕ್ಷತ್ರನೂರ್ಲಕ್ಷ ಸ್ವಾತಂತ್ರ್‍ಯಸಿರಿಯಲ್ಲಿ
ನಕ್ಕುನಲಿಯುತಲಿರಲು, ಸೆರೆಮನೆಯ ಒಳಬದಿಯ
ಗಾಳಿ ಸುಂಯ್ಗುಡುತಿತ್ತು! ಕಂಗಳಲಿ ನೀರೂರಿ   ೫೫
ಗೋಡೆಯಲಿ ಮಸಿಯಿಂದ ನಾಬರೆದ ಚಿತ್ರದೆಡೆ
ಕಣ್ತಿರುವಿ ಕೈಮುಗಿದೆ ಗಾಂಧಿಗೆ ಮಹಾತ್ಮನಿಗೆ!
– “ನಿಜಬುದ್ಧ! ಭಾರತಿಯ ಹಿರಿಮಗ-ನಮಗೆಲ್ಲ
ಆತ್ಮ ಸ್ವಾತಂತ್ರ್‍ಯವನು ಸಾಧಿಸುವ ಮಂತ್ರವನು
ಬೋಧಿಸಿದ ನಿಜಗುರುವೆ! – ನಿನಗೆ ಚಿರಜಯಮಕ್ಕೆ!”   ೬೦
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ