Home / ಕವನ / ಕವಿತೆ / ಸೀರೆ ಝಾಡಿಸಿದಳೆಂದರೆ

ಸೀರೆ ಝಾಡಿಸಿದಳೆಂದರೆ

ಮಕ್ಕಳು ಆಡುತ್ತಿರುತ್ತವೆ
ತಾಯಿ ಮಗುವಿಗೆ ಹಾಲು ಕೊಡುತ್ತಿರುತ್ತಾಳೆ
ದುಡಿವ ಜನ ದುಡಿಯುತ್ತಿರುತ್ತಾರೆ
ಓಡಾಡುವವರು ಓಡಾಡುತ್ತಿರುತ್ತಾರೆ
ಮಲಗಿರುವವರು ಮಲಗಿರುತ್ತಾರೆ
ಕುಳಿತಿರುವವರು ಕುಳಿತಿರುತ್ತಾರೆ
ಹೊಟ್ಟೆಗೋ ಹೊಟ್ಟೆಕಿಚ್ಚಿಗೋ
ಕರುಳ ಕರೆಗೋ ಸಂಚು ಹೊಂಚುಗಳಿಗೋ
ಸೆಳೆದಾಟಗಳಿಗೋ ಹಲವರು
ಹಲವು ವಿಧಗಳಲ್ಲಿ ಬಡಿದಾಡುತ್ತಿರುತ್ತಾರೆ
ಇಲ್ಲೇ ಇಲ್ಲೇ ಶಾಶ್ವತವಾಗಿ ಇರುತ್ತೇವೆಂಬಂತೆ
ಅಷ್ಟಾವಕ್ರಗಳಲ್ಲೂ ಎಲ್ಲಾ ಸುಸೂತ್ರ
ನಡೆದಿರುತ್ತದೆ ಬದುಕು ಜಟಕಾ ಬಂಡಿ
ಇವನೆಲ್ಲ ಹೊತ್ತ ಈ ತಾಯಿ
ಸುಮ್ಮನೆ ಬಿಮ್ಮನೆ ಬೀಗಿಕೊಂಡಿದ್ದರೆ
ಎಲ್ಲ ಸಲೀಸಾಗಿ ಸಾಗುತ್ತಿರುತ್ತದೆ
ಅವಳಿಗೆ ಹೊಟ್ಟೆ ನೋವಾಗಿ
ಹೊಡೆಮರಳಿತೆಂದರೆ
ಬೇಜಾರಾಗಿ ಒಮ್ಮೆ ಮೈ ನಡುಗಿಸಿದಳೆಂದರೆ…
ಅಥವಾ ಬಾಯಿ ತೆರೆದು ಆಕಳಿಸಿದಳೆಂದರೆ….
ಅಥವಾ ಅವಳಿಗೆ ಸೀನು ಬಂದು
ಸುಡು ಸುಡು ದ್ರವದ ಸೀನು
ಸೀದಿದಳೆಂದರೆ….
ಅಥವಾ ತನ್ನ ಸೀರೆ ನೆರಿಗೆಗಳ
ಸರಿಪಡಿಸಿಕೊಳ್ಳಲು ಸೀರೆ ಝಾಡಿಸಿದಳೆಂದರೆ…
ಅಥವಾ ಯಾಕಾದರೂ ನಿಟ್ಟುಸಿರು ಬಿಟ್ಟು
ಭೋರೆಂದು ಉಸಿರು ಬಿಡತೊಡಗಿದಳೆಂದರೆ…
ನಿಂತವರು ನಿಂತಲ್ಲಿ ಕುಂತವರು ಕುಂತಲ್ಲಿ
ಮಲಗಿದವರು ಅಲ್ಲೆ ಓಡಾಡುವವರು ಅಲ್ಲಲ್ಲೆ
ಬಡಿದಾಡುವವರು ಕಚ್ಚಾಡುವವರು
ಪ್ರೀತಿಸುವವರು ರಮಿಸುವವರು
ರೋಗಿಗಳು ಭೋಗಿಗಳು ಯುವಕರು ಮುದುಕರು
ಕೂಸು ಕುನ್ನಿ ಗಂಡು ಹೆಣ್ಣು ಎಲ್ಲ ಎಲ್ಲರೂ
ನೆಲಸಮ ಮಣ್ಣಲ್ಲಿ ಮಣ್ಣು
ಇಲ್ಲಿ ಉಳಿದ ಬಾಯಿ ಬಡಕೊಳ್ಳುವವರು
ಪತ್ರಿಕೆ-ಆಕಾಶವಾಣಿ-ದೂರವಾಣಿ ಸುದ್ದಿಗಳಿಗೆ
ಕೆಲವು ದಿನ ಆಹಾರ ಸಿಗುವುದು
ಅನುಕಂಪಗಳ ಸುರಿಮಳೆ ಸುರಿಯುತ್ತದೆ
ಸಹಾಯ ಹಸ್ತ ಭೂಮಂಡಲದುದ್ದ ಚಾಚುತ್ತವೆ
ಕೆಲಕಾಲ ಗತಿಸಿದಂತೆಲ್ಲಾ
ಈ ತಾಯಿಯ ಮೈಮೇಲಾದ ಗಾಯ
ಮಾದು ಹೋಗಿಬಿಡುತ್ತವೆ
ಎಂದಿನಂತೆ ಆಡುವವರು ಆಡುತ್ತಾರೆ
ಹೊಡೆದಾಡುವವರು ಹೋರಾಡುವವರು
ದುಡಿಯುವವರು ದುಃಖಿಸುವವರು
ನಗುವವರು ಕೆಲೆಯುವವರು
ತಂತಮ್ಮ ಪರಿಗಳ ಬದುಕುತ್ತಾರೆ
ಮತ್ತೆ ಈ ತಾಯಿ ಸುಮ್ಮನೆ ಬಿಮ್ಮನೆ
ಬೀಗುತ್ತ ಸಾಗುತ್ತಾಳೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...