Home / ಕವನ / ಕವಿತೆ / ಕರಾಳ ಬಾಯಿ

ಕರಾಳ ಬಾಯಿ

ಮಹಾ ಭೀಕರ ಕರಾಳ ಬಾಯಿ
ಯಾವುದೋ ಬಗೆಯಲ್ಲಿ ಕಬಳಿಸಬಹುದು
ಈ ಬಣ್ಣ ಬಣ್ಣದ ಮಾಯದ ಬದುಕನ್ನು
ಅಸಂಖ್ಯ ಧ್ವನಿಗಳು ಪ್ರಾಣಗಳೊಡನೆ
ಭೂಮಿಯೊಳಗೆ ಅಡಗುತ್ತವೆ
ಭೀಕರ ಬಾಯಿಯ ಸ್ವಾಟೆಯೊಳಗಿಂದ
ಉಳಿದು ಜಾರಿದ ಜೊಲ್ಲಿನಂತೆ
ಕೆಲವು ಆಕ್ರಂದನ ಧ್ವನಿಗಳು ಉಳಿಯುತ್ತವೆ
ತಣ್ಣಗಿನ ಉಪ್ಪು ನೀರು ಮೇರೆ ಮೀರಿ
ತನ್ನ ಕಪ್ಪು ನಾಲಗೆಯ ಚಾಚಿ
ದಂಡೆಗಳ ಜೀವರಾಶಿಗಳ
ಸುರ್ರೆಂದು ಸೆಳೆದುಕೊಳ್ಳಬಹುದು
ತನ್ನೊಡಲೊಳಗೆ
ಹೆಣಗಳು ಚೆಲ್ಲಾಪಿಲ್ಲಿ ದುರ್ವಾಸನೆ
ಅಗೋಚರ ರೋಗಪಾಶಗಳು
ಸಾಂಕ್ರಾಮಿಕ ನುಂಗಬಹುದು
ಊರು ಸೀಮೆಗಳ ಮಸಣ ಮಾಡಿ
ಕಾಳ್ಗಿಚ್ಚು ಕೆರಳಬಹುದು
ಅಡವಿಗಳು ಸಾಲದೆ ಊರುಗಳನ್ನು
ಚಪ್ಪರಿಸಿ ಕಬಳಿಸಬಹುದು
ಯುದ್ಧಗಳು ಬದ್ಧದ್ವೇಷಗಳು
ಬಾಂಬು ಬೀಜಗಳ ಬಿತ್ತಿ
ಬೆಳೆಯಬಹುದು ಹೆಣದ ಬಣವೆಗಳ
ನಂದನವನದ ನೆಲವಾಗುವುದು
ಕೆಂಡಬೂದಿಗಳ ಸುಡುಗಾಡು
ವಿಷಾನಿಲಗಳು ಉಸಿರುಕಟ್ಟಿಸಬಹುದು
ಮೇಲಿಂದ ಮೇಲೆ ಅಗೋಚರ ಆಪತ್ತುಗಳು
ಎರಗಬಹುದು ಬೆಚ್ಚಿಗಿನ ಬದುಕಿನ ಮೇಲೆ
ಮಾಡಬಹುದು ಜೀವಾಂಡ ಬ್ರಹಾಂಡವ
ಒಣ ಹುಡಿ ಬರಡು ಗ್ರಹದುಂಡೆ
ಅಬ್ಬಾ ಈ ಕಪ್ಪು ಕೈ ಕರಾಳ ಬಾಯಿ
ಅದೆಷ್ಟು ಕ್ರೂರ ಕಠೋರ
ನಿರ್ದಯ ನೀರವ
ಅಗೋಚರ ಅನಿರೀಕ್ಷಿತ ಅನಿವಾರ್ಯ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...